Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಮಹಾರಾಷ್ಟ್ರ ಸಿಎಂ ಸಹಾಯ ತೆಗೆದುಕೊಳ್ಳುತ್ತಿದ್ದಾರಾ..? ಏನಾಗ್ತಿದೆ ರಾಜ್ಯರಾಜಕಾರಣದಲ್ಲಿ..?

---Advertisement---

ಬೆಳಗಾವಿ: ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆಲ್ಲಿವ ಮೂಲಕ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಅಂದಿನಿಂದಾನು ಬಿಜೆಪಿ ಹಾಗೂ ಜೆಡಿಎಸ್ ನಾಯಕರದ್ದು ಒಂದೇ ವಾಕ್ಯ. ಈ ಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ಬೀಳಲಿದೆ ಎಂದು. ಇದೀಗ ಅದಕ್ಕೆ ಪುಷ್ಠಿ ನೀಡುವಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಕೂಡ ಹೇಳಿಕೆ ನೀಡಿದ್ದಾರೆ. ‘ನಾಥ’ ಆಪರೇಷನ್ ಗೆ ರೆಡಿಯಾಗಿದ್ದಾರಂತೆ.

ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಏಕನಾಥ ಶಿಂಧೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ‘ನಾನು ಇತ್ತಿಚೆಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಅಲ್ಲಿ ‘ನಾಥ’ ಆಪರೇಷನ್ ಮಾಡೋದಿದೆ ಎಂದಿದ್ದರು. ನಾನು ಕೇಳಿದೆ ನಾಥ ಆಪರೇಷನ್ ಅಂದ್ರೆ ಏನು ಅಂತ. ಆಗ ಏಕನಾಥ ಶಿಂಧೆ ಮಾಡಿದ ಆಪರೇಷನ್ ಎಂದು ಹೇಳಿದರು. ನಿಮ್ಮ ಅನುಭವ ನಮಗೆ ಬಗಳ ಮುಖ್ಯ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕರ್ನಾಟಕಕ್ಕೆ ಬರಬೇಕಾಗುತ್ತದೆ. ನಿಮ್ಮ ಅನುಭವ ನಮಗೆ ಕೆಲಸಕ್ಕೆ ಬರುತ್ತದೆ ಎಂದರು. ಅದಕ್ಕೆ ಆಯ್ತು ನಾನು ಬರುತ್ತೇನೆ ಎಂದು ಒಪ್ಪಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಅವರು ಕಾಂಗ್ರೆಸ್ ಮತ್ತು ಎನ್ಸಿಪಿ ನೇತೃತ್ವದ ಮಹಾಘಟಬಂಧನವನ್ನು ಬೀಳಿಸಿದ್ದರು. ಹೀಗಾಗಿ ಅವರದ್ದೇ ಅನುಭವವನ್ನು ಇಲ್ಲಿಯೂ ಅಪ್ಲೈ ಮಾಡಲು ವಿರೋಧ ಪಕ್ಷ ಪ್ಲ್ಯಾನ್ ಮಾಡುತ್ತಿದೆ. ಶಿಂಧೆ ಅವರೇ ಈ ರೀತಿಯ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಂದ್ರೆ ಸರ್ಕಾರ ಬೀಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿರುವುದು ತಿಳಿದಂತಾಗಿದೆ. ಇತ್ತಿಚೆಗೆ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆ ಮುಗಿದ ಮೇಲೆ ಏನಾಗುತ್ತೆ ನೋಡಿ ಎಂದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment