ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಬಹುಮತ ಬಂದಿದೆ. ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಘಟಾನುಘಟಿ ನಾಯಕರೇ ಬಿಜೆಪಿಯಲ್ಲಿಯೇ ಸೋಲು ಕಂಡಿದ್ದಾರೆ. ಸೋಲನ್ನು ಬಿಜೆಪಿ ನಾಯಕರು ಒಂದೊಂದು ರೀತಿಯಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದೀಗ ರೇಣುಕಾಚಾರ್ಯ ಅವರು ಬಿಜೆಪಿ ಸೋಲಿನ ಬಗ್ಗೆ ಹೊಸ ವಿಚಾರ ಹೇಳಿದ್ದಾರೆ.
ಸೋಲಿಗೆ ಬಿಜೆಪಿಯ ತಪ್ಪುಗಳೇ ಕಾರಣ. ಮೀಸಲಾತಿ ವಿಚಾರಕ್ಕೆ ಕೈ ಹಾಕಬಾರದಿತ್ತು. ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂಗೆ ಆಗಿತ್ತು. 10 ಕೆಜಿ ಅಕ್ಕಿಯನ್ನು ನಿಲ್ಲಿಸಬೇಡಿ ಎಂದು ಹೇಳಬೇಡಿ ಎಂದು ಹೇಳಿದ್ದೆ. ಆದರೂ ನಿಲ್ಲಿಸಿದ್ರು. ಬಸವರಾಜ್ ಬೊಮ್ಮಾಯಿ ಅವರು ನನ್ನ ಮಾತು ಕೇಳಲಿಲ್ಲ. ಬಿಜೆಪಿಯ ತಪ್ಪುಗಳೇ ಈ ಬಾರಿಯ ಸೋಲಿಗೆ ಕಾರಣವಾಯ್ತು.
ಬಿಜೆಪಿ ಬರೀ ಏಳು ದಿನದ ಹಿಂದೆ ಪ್ರಣಾಳಿಕೆಯನ್ನು ಹೊರಡಿಸಿತ್ತು. ಆದ್ರೆ ಕಾಂಗ್ರೆಸ್ ಎರಡು ತಿಂಗಳ ಮೊದಲೇ ಪ್ರಣಾಳಿಕೆ ಹೊರಡಿಸಿತ್ತು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ತಲುಪಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್