Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವಾಲಯಗಳ ಆದಾಯವನ್ನು ಚರ್ಚ್, ಮಸೀದಿಗೆ ನೀಡಲಾಗುತ್ತಿದೆಯಾ..?: ಬಿಜೆಪಿ ಆರೋಪಕ್ಕೆ ಅರ್ಚಕರ ಸಂಘ ಹೇಳಿದ್ದೇನು..?

---Advertisement---

ಬೆಂಗಳೂರು: ದೇವಾಲಯದಿಂದ ಬರುವ ಆದಾಯವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಚರ್ಚ್, ಮಸೀದಿಗಳಿಗೆ ನೀಡುತ್ತಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇದೀಗ ಆ ಆರೋಪಕ್ಕೆ ಅರ್ಚಕರ ಸಂಘ ಅದಕ್ಕೆ ಸ್ಪಷ್ಟನೆ ನೀಡಿದೆ. ಇಂದು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡುವ ಮೂಲಕ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದೆ.

 

ಎ, ಬಿ, ಸಿ ದರ್ಜೆಯ ಹುಂಡಿಯ ಹಣ ದುರುಪಯೋಗವಾಗುತ್ತಿಲ್ಲ. ಯಾವುದೇ ದೇವಾಲಯಗಳ ಹುಂಡಿ ಹಣ ದುರುಪಯೋಗವಾಗುವುದಿಲ್ಲ. ದೇವಸ್ಥಾನದ ಹುಂಡಿಯ ಹಣ ಒಳ್ಳೆಯ ಕಾರ್ಯಗಳಿಗೆ ಉಪಯೋಗವಾಗುತ್ತಿದೆ. ರಾಜ್ಯದ ಎ ದರ್ಜೆ ದೇವಸ್ಥಾನಗಳ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಎ ದರ್ಜೆ ದೇವಸ್ಥಾನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ನಡೆಸುತ್ತಿವೆ.

 

ರಾಜ್ಯ ಕಾಂಗ್ರೆಸ್ ಸರ್ಕಾರ ದೇವಾಲಯಗಳ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಅದನ್ನು ಸಹಿಸಲಾಗದ ರೀತಿ ಬಿಜೆಪಿ ನಾಯಕರು ಚರ್ಚ್, ಮಸೀದಿಗಳಿಗೆ ಹಣ ಹೋಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿತ್ಯ ಕೋಟ್ಯಂತರ ಹಣ ಸಂಗ್ರಹ ಆಗುತ್ತಿದ್ದು, ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಬಿಜೆಪಿಯವರೇ ದಯವಿಟ್ಟು ಅಪಪ್ರಚಾರ ಮಾಡುವುದನ್ನು ಬಿಡಿ ಎಂದು ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಮನವಿ ಮಾಡಿದ್ದಾರೆ.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 35 ಸಾವಿರ ಇಲಾಖೆಗಳಿವೆ. ಆ ದೇವಾಲಯಗಳಿಂದ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತೆ. ಆ ಆದಾಯವನ್ನು ದೇವಸ್ಥಾನಗಳ ಅಭಿವೃದ್ಧಿಗೆ ಬಳಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆ ಧರ್ಮದಾಯ ದತ್ತಿ ವಿಧೇಯಕದಲ್ಲಿ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಹಳೆ ನಿಯಮ ಬದಲಾಯಿಸಿ ಸರ್ಕಾರ ದೇವಸ್ಥಾನದ ಆದಾಯಕ್ಕೆ ಕನ್ನ ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...