Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರೇಮಿಗಳ ನಡುವೆ ಮದುವೆ ವಿಚಾರವೇ ಪ್ರಾಣಕ್ಕೆ ಕುತ್ತು ತಂದೀತಾ..? ಶಿವಮೊಗ್ಗದಲ್ಲೊಂದು ದುರಂತ ಅಂತ್ಯ..!

---Advertisement---

ಶಿವಮೊಗ್ಗ: ಅವರಿಬ್ಬರು ಮನಸ್ಸಾರೆ ಒಪ್ಪಿಯೇ ಪ್ರೀತಿ ಮಾಡುತ್ತಿದ್ದರು. ಆದರೆ ಮದುವೆ ಎಂಬ ವಿಚಾರ ಮುಗ್ಧ ಪ್ರೀತಿಯೇ ಅಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಪ್ರಿಯತಮೆ ಸಾವನ್ನಪ್ಪಿದ್ರೆ, ಪ್ರಿಯತಮ ಜೈಲಿಗೆ ಸೇರಿದ್ದಾನೆ.

ಜುಲೈ 2ರಂದು ಯುವತಿಯೊಬ್ಬಳು ನಾಪತ್ತೆಯಾಗಿದ್ದರ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವತಿಯ ತಾಯಿಗೆ ಆಕೆ ಲವ್ ಮಾಡುತ್ತಿದ್ದ ಹುಡುಗ ಸೃಜನ್ ಗೆ ಕಾಲ್ ಮಾಡಿ ಮಗಳ ಬಗ್ಗೆ ವಿಚಾರಿಸಿದ್ದರು. ಆದರೆ ಸೃಜನ್, ಮಧ್ಯಾಹ್ನ ಸಿಕ್ಕಿದ್ದಳು. ಬಸ್ ಸ್ಟಾಪ್ ಗೆ ಬಿಟ್ಟು ಬಂದೇ ಅಂತ ಹೇಳಿದ್ದ. ತಾಯಿಯ ದೂರು ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಜುಲೈ 21ರವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗುವುದಿಲ್ಲ. ಬಳಿಕ ಸಿಡಿಆರ್ ತೆಗೆಸಿದ ಪೊಲೀಸರಿಗೆ, ಸೃಜನ್ ಬಗ್ಗೆ ಸುಳಿವು ಸಿಗುತ್ತದೆ. ಹೆಚ್ಚು ಸಂಪರ್ಕದಲ್ಲಿ ಇರುವುದು ತಿಳಿದು ವಿಚಾರಣೆ ನಡೆಸಿದಾಗ ಇಬ್ಬರು ಪ್ರೀತಿಸುತ್ತಿದ್ದರು ಎಂಬ ವಿಚಾರ ಬಯಲಾಗಿದೆ. ಆತನಿಂದಾನೂ ಪ್ರೀತಿಸಿದ ಸತ್ಯ ಗೊತ್ತಾಗಿದೆ.

ತನಿಖೆ ಮುಂದುವರೆಸಿದ ಬಳಿಕ ಯುವತಿಯ ಲೊಕೇಶನ್ ಶಿವಮೊಗ್ಗದ ಹೆದ್ದಾರಿಪುರದ ಬಳಿ ಎಂಡ್ ಆಗಿರುತ್ತದೆ. ಸೃಜನ್ ಕಾಲ್ ರೆಕಾರ್ಡ್ ಕೂಡ ಅದನ್ನೇ ತೋರಿಸುತ್ತಿತ್ತು. ಬಳಿಕ ಆತನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಸೃಜನ್ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಸೃಜನ್ ಹಾಗೂ ಕೊಲೆಯಾದ ಯುವತಿ ಪ್ರೀತಿಸುತ್ತಿದ್ದರು. ಫೈನ್ಯಾನ್ಸ್ ಆಫೀಸಲ್ಲಿ ಸೃಜನ್ ಕೆಲಸ ಮಾಡುತ್ತಿದ್ದ. ಯುವತಿಯ ತಾಯಿಯೂ ಆತನ ಬಳಿ ಸಾಲ ಪಡೆದಿದ್ದಳು. ಸಾಲ ಮರುಪಾವತಿ ವೇಳೆ ಸೃಜನ್ ಗೆ ಯಿವತಿಯ ಪರಿಚಯವಾಗಿ, ಮುಂದೆ ಇಬ್ಬರು ಪ್ರೀತಿಸುವುದಕ್ಕೆ ಶುರು ಮಾಡಿದ್ದರು. ಇತ್ತಿಚೆಗೆ ಯುವತಿ ಮದುವೆ ಆಗಬೇಕೆಂದು ಹಠ ಹಿಡಿದಿದ್ದಳು. ಆದರೆ ಸೃಜನ್ ಈಗಲೇ ಅದು ಸಾಧ್ಯವಿಲ್ಲ, ಜವಾಬ್ದಾರಿ ಇದೆ ಎಂದಿದ್ದ. ಆದರೆ ಹುಡುಗಿ ಹಠದಿಂದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯ ಆಗಿದೆ. ಆನಂದಪುರದ ರೈಲ್ವೆಟ್ರ್ಯಾಕ್‌ ಬಳಿಯ ಚರಂಡಿಗೆ ಶವವನ್ನ ಬಿಸಾಕುತ್ತಾನೆ. ಆ ನಂತರ ಏನೂ ಗೊತ್ತಿಲ್ಲದವನಂತೆ ನಾಟಕ ಆಡುತ್ತಾನೆ. ಬಳಿಕ ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ..

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment