ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ವರ್ಗಾವಣೆದಂಧೆ ಬಗ್ಗೆ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಕಾಂಗ್ರೆಸ್ ನಾಯಕರು ಆ ಬಗ್ಗೆ ದಾಖಲೆ ಇಟ್ಟು ಮಾತನಾಡಿ ಎಂದಿದ್ದರು. ಇಂದು ಸದನಕ್ಕೆ ಬರುವಾಗ ಪೆನ್ ಡ್ರೈವ್ ಜೊತೆಗೆ ಬಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ದಾಖಲೆ ಕೇಳುತ್ತಿದ್ದಿರಲ್ಲ..? ಅದನ್ನೇ ತಂದಿದ್ದೀನಿ. ವರ್ಗಾವಣೆ ದಂಧೆಗೆ ಸಂಬಂಧಿಸಿದಂತ ಆಡಿಯೋ ಪೆನ್ ಡ್ರೈವ್ ನಲ್ಲಿದೆ. ವರ್ಗಾವಣೆ ದಂಧೆಯ ಆಡಿಯೋ ಇದರಲ್ಲಿದೆ. ಸಮಯ ಬಂದಾಗ ಎಲ್ಲವೂ ಹೊರಗೆ ತರುತ್ತೇನೆ ಎಂದಿದ್ದಾರೆ.
ನಾನು ರಾಜಕೀಯಕ್ಕೆ ಬರುವ ಮುನ್ನ ಬಾಟಲ್ ಕೊಡ್ತಿರಲಿಲ್ಲ. ಹಳ್ಳಿಯಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಇದ್ದವನಲ್ಲ. ನನ್ನ ಆಸ್ತಿ ಬಗ್ಗೆ ಇವತದ್ದೇ ಸರ್ಕಾರ ತನಿಖೆ ಮಾಡಿಸಲಿ. ನಮ್ಮ ಕಾಲದ ವರ್ಗಾವಣೆಯನ್ನೂ ತನಿಖೆ ಮಾಡಿಸಿ ಎಂದೂ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












