Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾ ಮತ್ತು ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಕಿತ್ತಾಟ ನಡೆಯೋದು ಗ್ಯಾರಂಟಿನಾ..? ಮಂಡ್ಯ ಬಗ್ಗೆ ಸಂಸದೆ ಹೇಳಿದ್ದೇನು..?

Facebook
Twitter
Telegram
WhatsApp

ಮಂಡ್ಯ: ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಮಟ್ಟ ಹಾಕಲು ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿದೆ. ಅದರ ಜೊತೆಗೆ ಇಂತಿಷ್ಟು ಕ್ಷೇತ್ರಗಳು ಬೇಕು ಅಂತ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಅದರಲ್ಲಿ ಮಂಡ್ಯ ಕೂಡ ಒಂದು. ಆದರೆ ಈಗ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧಿಯಾಗಿದ್ದಾರೆ. ಬಿಜೆಪಿ ಸೇರಿರುವ ಸುಮಲತಾಗೆ ಈಗ ಟಿಕೆಟ್ ಸಿಗುತ್ತಾ ಇಲ್ಲವಾ ಎಂಬುದೇ ಚಿಂತೆಯಾಗಿದೆ. ಈ ಬಗ್ಗೆ ಸಂಸದೆ‌ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

ಎಂಪಿ ಚುನಾವಣೆ ಸಂಬಂಧ ನಾನು ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಸರಿಯಾದ ಸಮಯ, ಸಂದರ್ಭ ನೋಡಿ ಎಲ್ಲವೂ ಅಂತಿಮವಾದಾಗ ಹೇಳುತ್ತೇನೆ. ಚುನಾವಣೆ ಬಗ್ಗೆ ಈಗ ನಾನು ಮಾತನಾಡಲ್ಲ ಎಂದಿದ್ದಾರೆ.

 

ಮಂಡ್ಯದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಅಥವಾ ನಿಲ್ಲಲ್ಲ ಎಂಬುದರ ಬಗ್ಗೆ ಈಗಾಗಲೇ ಹಲವು ಬಾರಿ ಮಾತನಾಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದರೂ, ಕ್ಷೇತ್ರಗಳ ಬಗ್ಗೆ ಇನ್ನು ಹಂಚಿಕೆಯಾಗಿಲ್ಲ. ಯಾವುದು ಅಂತಿಮವಾಗದೆ ಮಾತನಾಡುವುದು ಸರಿಯಲ್ಲ. ಮಂಡ್ಯದ ಜನ ನನ್ನ ಜೊತೆಗಿದ್ದಾರೆ. ಅಂಬರೀಶ್ ಅಭಿಮಾನಿಗಳು ಸಹ ನನ್ನ ಜೊತೆಗೆ ಇದ್ದಾರೆ. ನಾನು ಯಾರ ಬಳಿಯೂ ಟಿಕೆಟ್ ಕೇಳಿಲ್ಲ. ಈಗಲೂ ಟಿಕೆಟ್ ಕೇಳಲ್ಲ. ನಾನು ಎಂಪಿ ಸ್ಥಾನ ಇಲ್ಲದೆ‌ ಇರುವಾಗಲೇ ಪಕ್ಷಗಳ ಆಫರ್ ಗಳು ಸ್ವೀಕರಿಸಿಲ್ಲ. ಸದ್ಯ ಎಂಪಿ ಆಗಿದ್ದೀನಿ. ನಾನ್ಯಾಕೆ ಕ್ಷೇತ್ರ ಬಿಟ್ಟುಕೊಡಲಿ ಎಂದೇ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!