Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿಗೆ ಹೆಚ್ಡಿಕೆ ಬೆಂಬಲ ನೀಡಿದ್ದರ ಹಿಂದಿದೆಯಾ ಲೋಕಸಭಾ ಚುನಾವಣಾ ಗಿಮಿಕ್..!

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ವಿಚಾರ ಚರ್ಚೆಯಲ್ಲಿದೆ. ಸಿದ್ದರಾಮಯ್ಯ ನಂತರ ಡಿಕೆಶಿ ಸಿಎಂ ಆಗ್ತಾರೆ ಎನ್ನುವಾಗಲೇ ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅನೌನ್ಸ್ ಮಾಡಿದ್ದಾರೆ. ಇದು ಡಿಕೆಶಿ ಬೆಂಬಲಿಗರ ಕಣ್ಣು ಕೆಂಪಾಗಿಸಿದೆ. ಇದರ ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಡಿಕೆಶಿಗೆ ಬೆಂಬಲ ಸೂಚಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗುವುದಾದರೆ ನಮ್ಮ ಬೆಂಬಲ ಇರಲಿದೆ ಎಂದಿದ್ದರು. ಇದು ರಾಜಕೀಯ ತಂತ್ರ ಎನ್ನಲಾಗುತ್ತಿದೆ.

ಇದಕ್ಕೆಲ್ಲಾ ಕಾರಣ ಲೋಕಸಭಾ ಚುನಾವಣೆ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವೇ ಹೆಚ್ಚು. ಇದೇ ಹಳೇ ಮೈಸೂರು ಭಾಗವನ್ನೇ ಜೆಡಿಎಸ್ ನಾಯಕರು ಟಾರ್ಗೆಟ್ ಮಾಡಿರುವುದು. ಜೊತೆಗೆ ಡಿಕೆಶಿ ಇಲ್ಲಿ ಪ್ರಭಾವಶಾಲಿಯಾಗಿದ್ದಾರೆ. ಮೊದಲೇ ಬಿಜೆಪಿ ಜೊತೆಗೆ ಸೇರಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಹೊರಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಡಿಕೆಶಿ ಅವರ ವಿರುದ್ಧವಾಗಿ ಮಾತನಾಡಿದರೆ ಡ್ಯಾಮೇಜ್ ಆಗುತ್ತೆ ಎಂಬ ಆತಂಕ ಕುಮಾರಸ್ವಾಮಿ ಅವರದ್ದು.

ಹಿರಿಯರ ನಾಯಕರ ಸಲಹೆಯನ್ನು ಈ ಬಾರಿ ಕುಮಾರಸ್ವಾಮಿ ಅವರು ಪಡೆದಿದ್ದಾರೆ. ಡಿಕೆ ಶಿವಕುಮಾರ್ ವಿಚಾರಕ್ಕೆ ಸಾಫ್ಟ್ ಆಗಿ ಮಾತನಾಡುವಂತೆ ಸಲಹೆ ನೀಡಿದ್ದರಂತೆ. ‘ನಿಮ್ಮ ಆಂತರಿಕ ಕಿತ್ತಾಟ ಏನೇ ಇರಲಿ. ಡಿಕೆ ಶಿವಕುಮಾರ್ ಪರ ಸಿಂಪತಿ ಮಾತನಾಡಿ. ಡಿಕೆಶಿ ಜೊತೆಗೆ ಸಮರ ಸಾರಿದಷ್ಟು ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಾರೆ’ ಎಂದು ಸಲಹೆ ನೀಡಿದ್ದರಂತೆ. ಆ ಕಾರಣಕ್ಕಾಗಿಯೇ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ನಿಂತಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!