ಶಿವಮೊಗ್ಗ: ರಾಜ್ಯಾದ್ಯಂತ ಬೆಳೆದ ಬೆಳೆ ನಾಶವಾಗಿ, ಬರಗಾಲದ ಛಾಯೆ ಮೂಡಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಒಂದು ಪೈಸೆಯನ್ನು ಪರಿಹಾರ ನೀಡಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದೀಗ ಸಚಿವ ಮಧು ಬಂಗರಪ್ಪ ಪರಿಹಾರದ ವಿಚಾರಕ್ಕೆ ಸವಾಲು ಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ತರುವ ಧಮ್, ತಾಕತ್ ಯಾರಿಗೆ ಇದೆ ಎಂದು ಬಿಜೆಪಿ ಸಂಸದರಿಗೆ ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೇಂದ್ರ ಸರ್ಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲ. ನಮ್ಮ ರಾಜ್ಯದ ಸಚಿವರು ದೆಹಲಿಗೆ ಹೋದರೂ, ಅಧಿಕಾರಿಗಳನ್ನು ಮಾತನಾಡಿಸಲು ಆಗಲ್ಲ. ಈಗಾಗಲೇ ಬರಗಾಲದ ನಿರ್ವಹಣೆಯನ್ನು ಮಾಡಲು ಸರ್ಕಾರ ಕ್ರಮವಹಿಸಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಒಂದು ತಿಂಗಳ ಬಳಿಕ ತೊಂದರೆಯಾಗಬಹುದು. ಅದು ನೀರಿಗೆ ಸಮಸ್ಯೆಯಾಗಬಹುದು. ಮೇವಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ.
ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತ ಬಿಜೆಪಿಯವರು ಅಪಪ್ರಚಾರ ಮಾಡಿದರು. ಅಂತಹ ಸಮಸ್ಯೆ ಎಲ್ಲಾ ಏನು ಇಲ್ಲ. ಖಜಾನೆಯಲ್ಲಿ ಹಣವೂ ಇದೆ, ರೈತರಿಗೆ ನೀಡಲು ವಿದ್ಯುತ್ ಕೂಡ ಇದೆ. ರೈತರಿಗೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದೇವೆ. ಮುಂದೆ ನಿರಂತರವಾಗಿ ನೀಡುತ್ತೇವೆ. ನಗರದಲ್ಲೂ ಲೋಡ್ ಶೆಡ್ಡಿಂಗ್ ಎಲ್ಲೂ ಮಾಡ್ತಿಲ್ಲ. ಕಳೆದ ತಿಂಗಳಿನಿಂದ ವಿದ್ಯುತ್ ಬಳಕೆ ಶೇಕಡ 90 ರಷ್ಟು ಹೆಚ್ಚಾಗಿದೆ ಎಂದಿದ್ದಾರೆ. ಇದೇ ವೇಳೆ ಸೊರಬ ಪಟ್ಟಣಕ್ಕೆ ಸದ್ಯಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











