Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಇದೆಯಾ? : ಕುಮಾರಸ್ವಾಮಿ ಪ್ರಶ್ನೆ

---Advertisement---

 

ಕಾವೇರಿಗಾಗಿ ಇಂದು ಬೆಂಗಳೂರು ಬಂದ್ ಮಾಡಲಾಗಿದೆ. ಆದರೆ ಬಂದ್ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು @INCKarnataka ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?.

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ.
ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?.

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ.
#ಬೆಂಗಳೂರು_ಬಂದ್ #ಕಾವೇರಿ_ನಮ್ಮದು ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment