ದರ್ಶನ್ ಕೇಸಲ್ಲಿ ಸಚಿವರ ಒತ್ತಡ ಇದೆಯಾ..? : ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೇಳಿದ್ದೇನು..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್ ಆದಾಗಿನಿಂದ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ವರದಿಯನ್ನು ತಪ್ಪಾಗಿ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ, ದರ್ಶನ್ ಅವರನ್ನು ತಪ್ಪಿತಸ್ಥ ಸ್ಥಾನದಿಂದ ಹೊರಗೆ ಇರಿಸಲು ಸಚಿವರಿಂದಾನೇ ಗೃಹ ಸಚಿವರಿಗೆ ಬೇಡಿಕೆ ಇದೆ. ಹೀಗೆ ನಾನಾ ರೀತಿಯಾದಂತ ಪ್ರಶ್ನೆಗಳು ಓಡಾಡುತ್ತಿವೆ. ಇದೀಗ ಹೊಸದಾಗಿ ಈ ಪ್ರಕರಣದಲ್ಲಿ ವಿಶೇಷ ಅಭಿಯೋಜಕರನ್ನು ಬದಲಾವಣೆ ಮಾಡಲಾಗುತ್ತಿದೆ ಎಂಬ ವಿಚಾರ ಹರಿದಾಡುತ್ತಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾಪವೇ ಇಲ್ಲ. ಈ ಕೇಸನ್ನು ನೋಡಿಕೊಳ್ಳುತ್ತಿರುವ ವಿಶೇಷ ಅಭಿಯೋಜಕರು ಪ್ರಸನ್ನ ಕುಮಾರ್ ಅವರಿದ್ದಾರೆ. ಆದರೆ ಪ್ರಸನ್ನ ಕುಮಾರ್ ಅವರನ್ನು ಬದಲಾವಣೆ ಮಾಡಿ ಎಂದು ಯಾರೂ ಕೂಡ ನನ್ನ ಬಳಿ ಕೇಳಿಲ್ಲ. ಈ ಸಂಬಂಧ ಭೇಟಿಯನ್ನು ಮಾಡಿಲ್ಲ, ಒತ್ತಡವನ್ನೂ ಹಾಕಿಲ್ಲ. ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅವಕಾಶವನ್ನು ಕೊಡಲಾಗಿದೆ. ಒಂದು ವೇಳೆ ಯಾರಾದರೂ ಒತ್ತಡ ಹಾಕಿದರೂನು ಈ ಬಗ್ಗೆ ನಾವೂ ಕೇಳಲ್ಲ ಎಂದಿದ್ದಾರೆ.

ಇನ್ನು ಸಚುವರು ಒತ್ತಡ ಹಾಕುತ್ತಿದ್ದಾರೆ ಎಂಬುದೆಲ್ಲ ಸತ್ಯವಲ್ಲ. ವಿರೋಧ ಪಕ್ಷದವರು ಹೇಳುವುದೆಲ್ಲಾ ನಿಜವಾಗಿರುತ್ತದಾ..? ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಇದೆಲ್ಲಾ ಹೇಳೋದೆಲ್ಲಾ ಸುಳ್ಳು ಎಂದು ಹರಿದಾಡುತ್ತಿದ್ದ ಗಾಸಿಪ್ ಸ್ಟೋರಿಗೆ ಕ್ಲಾರಿಟಿ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಇಂದು ಬೆಳಗ್ಗೆಯೇ ಅನಾರೋಗ್ಯಕ್ಕೆ ಈಡಾಗಿದ್ದರು. ಪೊಲೀಸರು, ಠಾಣೆಗೆ ವೈದ್ಯರನ್ನು ಕರೆಸಿ, ಚಿಕಿತ್ಸೆ ಕೊಡಿಸಿದ್ದಾರೆ. ಸರಿಯಾಗಿ ಊಟ, ತಿಂಡಿ, ನಿದ್ದೆ ಮಾಡದ ಕಾರಣ ಪವಿತ್ರಾಗೆ ಲೋ ಬಿಪಿ ಸಮಸ್ಯೆ ಕಾಡಿತ್ತು.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

19 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

44 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago