ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಎರಡು ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧುಸಿದ್ದ ಪ್ರತಾಪ್ ಸಿಂಹ, ಮೂರನೇ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಕನಸು ಕಂಡಿದ್ದರು. ಆದರೆ ಆ ಕನಸಿಗೆ ಹೈಕಮಾಂಡ್ ನಾಯಕರು ತೆರೆ ಎಳೆದಿದ್ದಾರೆ. ಈ ಬಾರಿಯ ಟಿಕೆಟ್ ಜಸ್ಟ್ ಮಿಸ್ ಆಗಿದೆ. ಮೈಸೂರು-ಕೊಡಗು ಕ್ಷೇತ್ರಕ್ಕೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದ್ದು, ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ಅವರೇ ಕಾರಣ ಎಂಬ ಚರ್ಚೆಯಾಗುತ್ತಿದೆ. ಆದರೆ ಮೂಲಗಳ ಪ್ರಕಾರ ಆಗಿರುವುದೇ ಬೇರೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ ಪ್ರತಾಪ್ ಸಿಂಹ ತಮ್ಮದೇ ತಪ್ಪಿಗೆ ಬೆಲೆ ಕಟ್ಟಿದ್ದಾರೆ ಎನ್ನಲಾಗುತ್ತಿದೆ. ಪ್ರತಾಪ್ ಸಿಂಹ ತಾವೂ ಮಾಡಿಕೊಂಡ ಸಾಲು ಸಾಲು ಯಡವಟ್ಟುಗಳಿಂದಾನೇ ಟಿಕೆಟ್ ಕೈತಪ್ಪಿದೆ ಎನ್ನಲಾಗಿದೆ. ಪ್ರತಾಪ್ ಸಿಂಹ ಅವರ ವಿರುದ್ಧ ಮೈಸೂರು-ಕೊಡಗು ಭಾಗದಲ್ಲಿ ಬಿಜೆಪಿಯಲ್ಲಿಯೇ ಅಸಮಾಧಾನವಿತ್ತು. ಇದು ಅಮಿತ್ ಶಾ ಅವರ ತನಕ ತಲುಪಿತ್ತು. ಹೀಗಾಗಿಯೇ ಈ ಬಾರಿ ಟಿಕೆಟ್ ಮಿಸ್ ಆಗಿದೆ ಎನ್ನಲಾಗಿದೆ.
ಜೊತೆಗೆ ಬಿಜೆಪಿ ಹೈಕಮಾಂಡ್ ಈ ಬಾರಿ ಅಭ್ಯರ್ಥಿಗಳ ಗ್ರೌಂಡ್ ರಿಪೋರ್ಟ್ ರೆಡಿ ಮಾಡಿ, ಬಳಿಕ ನಿರ್ಧಾರ ಮಾಡಿ, ಅಭ್ಯರ್ಥಿಗಳ ಪಟ್ಟಿಯನ್ನು ಅನೌನ್ಸ್ ಮಾಡಿದೆ. ಪ್ರತಾಪ್ ಸಿಂಹ ಬಗ್ಗೆ ಜನ ಅಷ್ಟೇನು ಒಲವು ತೋರಿಲ್ಲ ಎಂಬುದು ರಿಪೋರ್ಟ್ ನಲ್ಲಿ ಕಂಡು ಬಂದಿದ್ದು ಅದಕ್ಕೆ ಟಿಕೆಟ್ ನೀಡಿಲ್ಲ ಎನ್ನಲಾಗುತ್ತಿದೆ. ಇದರ ಜೊತೆಗೆ ಒಡೆಯರ್ ಅವರಿಗೆ ಟಿಕೆಟ್ ನೀಡಿದರೆ ಉತ್ತರ ಭಾರತದಲ್ಲೂ ವರ್ಕೌಟ್ ಆಗಲಿದೆ ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಎರಡು ಬಾರಿ ಗೆದ್ದು, ಟಿಕೆಟ್ ಸಿಗುವ ಆತ್ಮವಿಶ್ವಾಸದಲ್ಲಿದ್ದ ಪ್ರತಾಪ್ ಸಿಂಹ ಇಂದು ಟಿಕೆಟ್ ಇಲ್ಲದೆ ಬೇಸರದ ನಡೆ ತೋರುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್