Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀವಿನ್ನು ಉಪಮುಖ್ಯಮಂತ್ರಿ, ನಿಮ್ಮನ್ನ ಸಿಎಂ ಮಾಡಿದರೆ ಕಷ್ಟ : ಚಂದ್ರಚೂಡ್ ಹಿಂಗೇಳಿದ್ಯಾಕೆ..?

---Advertisement---

ಬೆಂಗಳೂರು; ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಂಭ್ರಮದಲ್ಲಿ ಸ್ಟಾರ್ ನಟರು ಭಾಗವಹಿಸಿಲ್ಲ ಎಂಬುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶಗೊಂಡು ನೀಡಿದ ಹೇಳಿಕೆ ಇಂದು ಹಲವರ ವಿರೋಧಕ್ಕೆ‌ ಕಾರಣವಾಗಿದೆ. ಅದರಲ್ಲೂ ಚಿತ್ರರಂಗ ವರ್ಸಸ್ ಸರ್ಕಾರ ಎಂಬಂತೆ ಆಗಿದೆ. ಇದೀಗ ಡಿಕೆ ಶಿವಕುಮಾರ್ ಹಾಗೂ ಶಾಸಕ ರವಿ ಗಾಣಿಗ ಮಾತಿಗೆ ಚಂದ್ರಚೂಡ್ ಲೈವ್ ಬಂದು ಪ್ರತಿಕ್ರಿಯೆ ನೀಡಿದ್ದಾರೆ.

ರವಿಕುಮಾರ್ ನೇರವಾಗಿ ಹೆಸರು ತೆಗೆದುಕೊಂಡು ಮಾತನಾಡಬೇಕಿತ್ತು. ಆಗ ಅವರ ಮಾತಿಗೆ ಒಂದು ತೂಕ ಒರ್ತಾ ಇತ್ತು. ಈ ಹೀರೋಗಳನ್ನ ಬ್ಯಾನ್ ಮಾಡಬೇಕು. ಶಾಸಕರಾಗಿ ಈ ಹೇಳಿಕೆ‌ ನೀಡಬಾರದು. ಹಿಟ್ಲರ್ ರೀತಿ ಆಡಬಾರದು. ರವಿಕುಮಾರ್ ಅವರು ಕ್ಷಮೆ ಕೇಳಬೇಕು. ಕಿಚ್ಚ ಸುದೀಪ್ ಬಗ್ಗೆ ಮಾತನಾಡಿದ್ದೀರಿ. 2004ರಿಂದ ಈವರೆಗೆ ಅವರು ಅವಾರ್ಡ್ ತೆಗೆದುಕೊಂಡಿಲ್ಲ. ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ಈ ಮೊದಲು ಅವಾರ್ಡ್ ಕೊಡುತ್ತೇವೆ ಎಂದು ಕೊಟ್ಟಿಲ್ಲ. ರಾಜ್ಯ ಪ್ರಶಸ್ತಿ ಎಂದರೆ ಅಸಹ್ಯವಾಗಿ ಹೋಗಿದೆ. ಅವಾರ್ಡ್ಸ್ ನಿರಾಕರಿಸೋದಕ್ಕೆ ಅವರದ್ದೇ ಆದ ಕಾರಣವಿದೆ. ಪಕ್ಷದ ಕಾರ್ಯಕ್ರಮಕ್ಕೆ ಚಿತ್ರರಂಗದವರು ಬಂದಿಲ್ಲ ಎಂದು ಅಧಿಕಾರಕ್ಕೆ ಬಂದ ಮೇಲೆ ಸೇಡು ತೀರಿಸಿಕೊಳ್ಳುವುದು ತಪ್ಪು.

ರಾಜಕಾರಣಿಗಳು ಹಿಟ್ಲರ್ ನೀತಿ ತೋರಬಾರದು. ನೀವೂ ಇನ್ನೂ ಉಪಮುಖ್ಯಮಂತ್ರಿ. ನಿಮ್ಮನ್ನ ಸಿಎಂ ಮಾಡಿದರೆ ರಾಜ್ಯಕ್ಕೆ ಕಷ್ಟ ಆಗುತ್ತದೆ. ಓರ್ವ ಹಿಟ್ಲರ್ ನ ತಂದು ಕೂರಿಸಬಾರದು. ಈ ವರ್ತನೆ ಬಿಟ್ಟರೆ ದೊಡ್ಡ ನಾಯಕರಾಗ್ತೀರಾ. ಪುಡಿ ರೌಡಿ ಥರ ಮಾತನಾಡೋದು ಬಿಟ್ಟು ಬಿಡಿ, ನಿಮ್ಮ ಸಾಧುಕೋಕಿಲ ತಪ್ಪು ಮಾಡಿದ್ದಾರೆ. ಅದನ್ನು ಮೊದಲು ಸರಿ ಮಾಡಿ ಎಂದು ಚಂದ್ರಚೂಡ ಅವರು ಲೈವ್ ಬಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...