Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೆ ತಿಳಿಸುವುದು ಎಲ್ಲರ ಜವಾಬ್ದಾರಿ : ಕೆ.ಎಸ್.ನವೀನ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜೂ.03) : ಒಂದು ತಿಂಗಳ ಕಾಲ ವಿಕಾಸ ತೀರ್ಥ ಯಾತ್ರೆ ಅಭಿಯಾನ ನಡೆಯಲಿದೆ. ಇದಕ್ಕಾಗಿ ರಾಜ್ಯದ ಕೆಲವು ನಾಯಕರುಗಳು ಜಿಲ್ಲೆಗೆ ಆಗಮಿಸಲಿದ್ದಾರೆ. ಶಕ್ತಿ ಕೇಂದ್ರ, ಬೂತ್ ಅಧ್ಯಕ್ಷರು, ಫಲಾನುಭವಿಗಳನ್ನು ಭೇಟಿ ಮಾಡಲಾಗುವುದು. ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು, ಪದಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ. 20 ರಂದು ಪ್ರಧಾನಿ ಮೋದಿರವರು ಡಿಜಿಟಲ್ ರ್ಯಾಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಳು ದಿನಗಳ ಕಾಲ ಜಿಲ್ಲೆಯಲ್ಲಿ ಮನೆ ಮನೆ ಸಂಪರ್ಕಕ್ಕೂ ಸಿದ್ದತೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೆ ತಿಳಿಸುವುದು ಎಲ್ಲರ ಜವಾಬ್ದಾರಿ. ಮುಂದಿನ ವರ್ಷ ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ನರೇಂದ್ರಮೋದಿರವರನ್ನು ಮತ್ತೆ ದೇಶದ ಪ್ರಧಾನಿಯನ್ನಾಗಿಸಬೇಕು ಎಂಬುದು ನಮ್ಮ ಗುರಿ. ಕೇಂದ್ರದಿಂದ ಅನೇಕ ಯೋಜನೆಗಳು ಜಿಲ್ಲೆಗೆ ಸಿಕ್ಕಿದೆ ಎಂದು ತಿಳಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...