Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಥ ಕಷ್ಟದ ಸಮಯದಲ್ಲೇ ಗೊತ್ತಾಗೋದು, ಸರ್ಕಾರ ರೈತರ ಪರ ಇಲ್ಲ : ಬಸವರಾಜ್ ಬೊಮ್ಮಾಯಿ

Facebook
Twitter
Telegram
WhatsApp

ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿದೆ. ಬರ ಪರಿಹಾರವನ್ನು ಸಮರ್ಥವಾಗಿ ಪರಿಹರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ಇದು ಬರೀ ಬಾಯಿ ಮಾತಿನಲ್ಲೇ ನಡೆಯುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

 

ಬರೀ ಹೇಳಿಕೆಯಲ್ಲಿಯೇ ಈ ಸರ್ಕಾರ ಆಡಳಿತ ನಡೆಸುತ್ತಾ ಇದೆ. ರಾಜ್ಯದಲ್ಲಿ ಬರಗಾಲ ಆವರಿಸಿ ಮೂರಿ ತಿಂಗಳಾಗಿದೆ, ಬೆಳೆ ನಾಶವಾಗಿದೆ. ಇದರಿಂದ ರೈತರು ಕಂಗಲಾಗಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ. ಸರ್ಕಾರ ಜೀವಂತ ಇದೆಯೋ, ಇಲ್ಲವೋ ಎಂಬುದು ಇಂತಹ ಸಂದರ್ಭದಲ್ಲಿಯೇ ಗೊತ್ತಾಗೋದು. ಬರೀ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡಿಕೊಂಡು ಬರುತ್ತಿದೆ. ಕುಡಿಯುವ ನೀರಿನ ಸಮಸ್ಯೆಗೂ ಇದುವರೆಗೂ ಪರಿಹಾರ ಹುಡುಕಿಲ್ಲ. ನಿಮ್ಮ ಬಳಿ ಈಗಾಗಲೇ ವಿಕೋಪ ನಿಧಿ ಇದೆ. ಅದನ್ನು ಬಿಡುಗಡೆ ಮಾಡಿ ಎಂದಿದ್ದಾರೆ.

ನಮ್ಮ‌ ಕಾಲದಲ್ಲೂ ಪ್ರವಾಹ ಬಂತು. ಆದರೆ ನಾವೂ ಕೇಂದ್ರಕ್ಕಾಗಿ ಕಾಯುತ್ತ ಕೂರಲಿಲ್ಲ. ಹೇಳಿಕೆಯಿಂದ ಬರಗಾಲ ಪರಿಹಾರ ಆಗಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಾನೂ ಯಡವಟ್ಟು ಮಾಡಿಕೊಂಡೇ‌ ಬರುತ್ತಿದೆ. ವರ್ಗಾವಣೆ ವಿಷಯದಲ್ಲಿ ಅಸಮಾಧಾನವಿದೆ. ಎಲ್ಲಾ‌ ಸಮಾಜಕ್ಕೂ ನ್ಯಾಯ ಕೊಡುತ್ತೇವೆ ಎಂದು ಹೇಳಿದ್ದರು, ಆದರೆ ಅದು ಆಗಿಲ್ಲ. ಬೇರೆ ಬೇರೆ ರೂಪದಲ್ಲಿ ಭ್ರಷ್ಟಾಚಾರ ಹೊರಗೆ ಬರುತ್ತಿದೆ. ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಶಿವಶಂಕರಪ್ಪ ಎದ್ದಿತ್ತಂತಹ ಪ್ರಶ್ನೆಗಳಿಗೆ ಸಿಎಂ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!