Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಬರೆದ ಪತ್ರ ಎಲ್ಲಿಂದ ಬಂತು ಅನ್ನೋದು ಗೊತ್ತಾಯ್ತು.. ಆದ್ರೆ ಬರೆದವರ ಸುಳಿವು ಸಿಐಡಿಗೆ ಸಿಗಲೇ ಇಲ್ಲ..!

---Advertisement---

 

 

ಮೈಸೂರು: ಕಾಂಗ್ರೆಸ್ ಸರ್ಕಾರದಲ್ಲಿ ಚೆಲುವರಾಯಸ್ವಾಮಿ ಕೃಷಿ ಸಚಿವರಾಗಿ ಇನ್ನು ಮೂರು ತಿಂಗಳು ಕಳೆದಿದೆ. ಅಷ್ಟರಲ್ಲಿಯೇ ಭ್ರಷ್ಟಾಚಾರದ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪ ಕೇಳಿ ಬಂದಿದೆ. ಈ ಬೆನ್ನಲ್ಲೇ ಈ ಕೇಸನ್ನು ಸಿಐಡಿಗೆ ವಹಿಸಲಾಗಿದೆ. ಈಗಾಗಲೇ ಇದರ ತನಿಖೆ ಶುರುವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರವೊಂದು ಬಂದಿದೆ. ಆ ಪತ್ರ ಎಲ್ಲಿಂದ ಬಂರು, ಬರೆದವರು ಯಾರು, ತಲುಪಿಸಿದವರು ಯಾರೂ ಎಂಬ ವಿಚಾರವಾಗಿ ತನಿಖೆ ನಡೆಯುತ್ತಿದೆ. ಸಿಐಡಿ ಅಧಿಕಾರಿಗಳು ಸದ್ಯ ಪತ್ರದ ಹಿಂದೆ ಬಿದ್ದಿದ್ದು, ನಿರಾಸೆಯನ್ನು ಕಂಡಿದ್ದಾರೆ.

ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ಭಾಗವಾಗಿ ನಿನ್ನೆಯೇ ಮಂಡ್ಯ ಕೃಷಿ ಕಚೇರಿಯ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಂಟಿ ನಿರ್ದೇಶಕ ಅಶೋಕ್ ಅವರಿಂದಾನೂ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಆ ಪತ್ರ ಎಲ್ಲಿಂದ ಬಂತು ಎಂಬ ಮಾಹಿತಿಯನ್ನು ಪಡೆದು, ಮಂಡ್ಯದಿಂದ ಮೈಸೂರಿಗೆ ಹೋಗಿದ್ದಾರೆ.

ಮೈಸೂರಿನ ಸರಸ್ವತಿ ಪುರಂ ಅಂಚೆ ಕಚೇರಿಯಿಂದ ಆ ಪತ್ರ ಬೆಂಗಳೂರಿನ ರಾಜ್ಯಪಾಲರ ಕಚೇರಿಗೆ ರವಾನೆಯಾಗಿದೆ. ಜುಲೈ 14ರಂದು ಪತ್ರ ರವಾನೆಯಾಗಿದೆ. ಸಿಐಡಿ ಅಧಿಕಾರಿಗಳು ಅಂಚೆ ಕಚೇರಿಯ ಸಿಬ್ಬಂದಿಗಳನ್ನು ಸುಮಾರು ಒಂದು ಗಂಟೆಗಳ‌ ಕಾಲ ವಿಚಾರಣೆ ನಡೆಸಿದ್ದಾರೆ. ಮಾಹಿತಿಯನ್ನು ಕಲೆ ಹಾಕಿದ್ದಾರೆ. ಬಳಿಮ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಸರಸ್ವರಿಪುರಂ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿರುವ ಮಾಹಿತಿ ಮಾತ್ರ ಸಿಕ್ಕಿದೆ. ಅಂದಿನ ಸಿಸಿಟಿವಿ ಫೂಟೇಜ್ ಓವರ್ ಲ್ಯಾಪ್ ಆಗಿರುವ ಕಾರಣ, ಸಿಐಡಿ ಅಧಿಕಾರಿಗಳಿಗೆ ಆ ವ್ಯಕ್ತಿಯ ಸುಳಿವು ಸಿಕ್ಕಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...