Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೂರುಗಳಿರುವ ಚೈತ್ರಾ ಬಿಗ್ ಬಾಸ್ ಮನೆಯಲ್ಲಿರುವುದು ಒಳ್ಳೆಯದಲ್ಲ : ಹೊರ ಹಾಕಲು ಹೇಳಿದ ವಕೀಲ..!

Facebook
Twitter
Telegram
WhatsApp

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಅಂದ್ರೆ ಅದು ಬಿಗ್ ಬಾಸ್. ಈ ಬಾರಿಯ ಸೀಸನ್ 11‌ಶುರುವಾಗಿದೆ. 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಜೈಲು ದರ್ಶನ ಮಾಡಿ ಬಂದ ಚೈತ್ರಾ ಕುಂದಾಪುರ ಕೂಡ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಯಾಗಿದ್ದಾರೆ. ಆದರೆ ಬಿಗ್ ಬಾಸ್ ಮನೆಯಿಂದ ಮೊದಲು ಅವರನ್ನ ಹೊರ ಹಾಕುವಂತೆ ವಕೀಲರೊಬ್ಬರು ತಿಳಿಸಿದ್ದಾರೆ.

ಚೈತ್ರಾ ಅವರನ್ನ ತಕ್ಷಣವೇ ಬಿಗ್ ಬಾಸ್ ಶೋನಿಂದ ಹೊರಗೆ ಹಾಕಬೇಕು. ಇಲ್ಲವಾದಲ್ಲಿ ಕಲರ್ಸ್ ಕನ್ನಡದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ಕ್ರಮ ಕೈಗೊಳ್ಳಲಾಗುವುದು ವಕೀಲ ಕೆ.ಎಲ್. ಭೋಜರಾಜ್ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಹೋಸ್ಟ್ ಮಾಡುತ್ತಿರುವ ರಿಯಾಲಿಟಿ ಶೋ ಅತ್ಯಂತ ಜನಪ್ರಿಯವಾಗಿದೆ. ಆದರೆ ಅದರಲ್ಲಿ14ನೇ ಸ್ಪರ್ಧಿಯಾಗಿ ಆಯ್ಕೆಯಾಗಿರುವ ಚೈತ್ರಾ ಕುಂದಾಪುರ ಮೇಲೆ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳು ದಾಖಲಾಗಿವೆ. ಕೇಸ್ ಗಳು ಇರುವ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಇರಬಾರದು. ಹೀಗಾಗಿ ತಕ್ಷಣವೇ ಅವರನ್ನು ಹೊರ ಹಾಕಿ ಎಂದಿದ್ದಾರೆ. ಒಂದು ವೇಳೆ ಹೊರ ಹಾಕದೆ ಹೋದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ಸದ್ಯ ನರಕವಾಸಿಗಳಾಗಿದ್ದಾರೆ. ಕೆಲಸ ಮಾಡುವುದಕ್ಕೆಂದು ಕರೆದ ಸ್ವರ್ಗವಾಸಿಗಳ ಮೇಲೆಯೇ ದಿಡ್ಡ ರಂಪಾಟ‌ ಮಾಡಿದ್ದರು. ಶನಿವಾರ ಹಾಗೂ ಭಾನುವಾರ ಸುದೀಪ್ ಪಂಚಾಯ್ತಿ ಶುರುವಾಗಲಿದ್ದು, ಮೊದಲ ವಾರವೇ ಯಾರಿಗೆಲ್ಲಾ ಕ್ಲಾಸ್ ಸಿಗಲಿದೆ, ಅದರಲ್ಲೂ ಚೈತ್ರಾ ಕುಂದಾಪುರಗೆ ಸುದೀಪ್ ಯಾವ ರೀತಿ ಬುದ್ದಿ ಹೇಳುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕೂಡ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!