Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಆಸೆ ಅಲ್ಲ.. ಜನರ ಆಸೆ : ಜಮೀರ್ ಅಹ್ಮದ್

---Advertisement---

ದಾವಣಗೆರೆ: ರಾಜಕೀಯದಲ್ಲಿ ಗುರುತಿಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಸಚಿವರಾಗಬೇಕು, ಮುಖ್ಯಮಂತ್ರಿಯಾಗಬೇಕು ಹೀಗೆ ದೊಡ್ಡ ದೊಡ್ಡ ಆಸೆಗಳೇ ಇರುತ್ತವೆ. ಎಷ್ಟೋ ಮಂದಿ ಸಚಿವ ಸ್ಥಾನ ಸಿಗದೆ ಇದ್ದ ಕಾರಣಕ್ಕೆ ಪಕ್ಷ ಬಿಟ್ಟಿದ್ದಾರೆ. ಇದೀಗ ಶಾಸಕ ಜಮೀರ್ ಅಹ್ಮದ್, ತಾನೂ ಉಪಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾತನಾಡಿದ ಜಮೀರ್, ಈ ಬಾರಿ ಕಾಂಗ್ರೆಸ್ ಗೆ ಬಾರೀ ಡಿಮ್ಯಾಂಡ್ ಇದೆ. ಸುಮಾರು ಜನ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಹಲವು ಕಡೆಗಳಿಂದ ಜೆಡಿಎಸ್ ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ. ಈ ಬಾರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದು ಬಹಳ ಮುಖ್ಯ. ಹಾಲಿ ಶಾಸಕ ಎಸ್ ರಾಮಪ್ಪನಿಗೆ ಟಿಕೆಟ್ ಫಿಕ್ಸ್ ಇದೆ. ರಾಮಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ಅವರಿಗೆ ಟಿಕೆಟ್ ಗ್ಯಾರಂಟಿ.‌

ನನಗೆ ಉಪಮುಖ್ಯಮಂತ್ರಿಯಾಗಬೇಕೆಂಬ ಆಸೆ ಏನು ಇಲ್ಲ. ಆದರೆ ಅದು ಜನರ ಆಸೆಯಾಗಿದೆ.‌ ಅಲ್ಪಸಂಖ್ಯಾತರಿಗೆ ಈ ಬಾರಿ 20 ಟಿಕೆಟ್ ನೀಡಬೇಕೆಂದು ಕೇಳಿಕೊಂಡಿದ್ದೇವೆ. ಆದ್ರೆ ಟಿಕೆಟ್ ಗಿಂತ ನಮಗೆ ಪಕ್ಷದ ಗೆಲುವು ಮುಖ್ಯ. ಕಾಂಗ್ರೆಸ್ ಗೆಲ್ಲಬೇಕು ಅಂತಾನೇ ನಾನು ರಾಜ್ಯಪ್ರವಾಸ ಕೈಗೊಂಡಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...