ಬೈ ಎಲೆಕ್ಷನ್ ಸಂದರ್ಭದಲ್ಲಿ ಸಚಿವ ಸ್ಥಾನ ಕೇಳುವುದು ಸರಿಯಲ್ಲ; ರೇಣುಕಾಚಾರ್ಯ

suddionenews
1 Min Read

ಬೆಂಗಳೂರು: ಈ ಹಿಂದೆ ನಮ್ಮ ನಾಯಕರಾದ ಬಿ ಎಸ್ ಯಡಿಯೂರಪ್ಪ ನವರು ಸಿಎಂ ಆಗಿದ್ದಾಗ ನನ್ನ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಿದ್ದರು.

ಆಗ ಪ್ರಮಾಣಿಕವಾಗಿ ಕೆಲಸ ಮಾಡಿದ್ದೇನೆ, ಈಗ ಮತ್ತೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನನ್ನ ರಾಜಕೀಯ ಕಾರ್ಯದರ್ಶಿ ಮಾಡಿದ್ದಾರೆ ಎಂದು ನೂತನ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದರು.

ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಿದ್ದಾರೆ.
ಇದರಲ್ಲಿ ವಿಶೇಷ ಏನೂ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಶಾಸಕರ ನಡುವೆ ಸೇತುವೆ ಆಗಿ ಕೆಲಸ ಮಾಡುತ್ತೇನೆ.ನನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ಪಕ್ಷ ಮತ್ತು ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇನ್ನೂ ಬಾಕಿ ಉಳಿದಿರುವ ನಾಲ್ಕು ಸಚಿವ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ.
ಈಗಾಗಲೇ ಸಚಿವನಾಗಿ ಕೆಲಸ ಮಾಡಿದ್ದೇನೆ, ಸದ್ಯ ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಬರ್ತಿದೆ. ಹೀಗಾಗಿ ಈಗ ಸಚಿವ ಸ್ಥಾನ ಕೇಳುವುದು ಸರಿಯಲ್ಲ ಕಾಲ ಬಂದಾಗ ಕೇಳುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *