Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರದಿ ನೋಡದೆ ಅವೈಜ್ಞಾನಿಕ ಎನ್ನುವುದು ಸರಿಯಲ್ಲ : ಜಾತಿಗಣತಿ ವರದಿ ಬಗ್ಗೆ ಕಾಂತರಾಜು ಸ್ಪಷ್ಟನೆ

Facebook
Twitter
Telegram
WhatsApp

ಬೆಂಗಳೂರು: ಜಾತಿಗಣತಿ ವಿಚಾರದಲ್ಲಿ ಪರ – ವಿರೋಧಗಳು ಕೇಳಿ ಬರುತ್ತಲೆ ಇದೆ. ಅದರಲ್ಲೂ ಬಿಜೆಪಿ ನಾಯಕರು ಈ ಜಾತಿಗಣತಿ ಬಗ್ಗೆ ಸಾಕಷ್ಟು‌ ಗರಂ ಆಗಿದ್ದಾರೆ. ಅದರಲ್ಲಿ ಬೇಕಾದವರ ಸಹಿಯೇ ಇಲ್ಲ‌. ಅದೊಂದು ಫೇಕ್ ಎಂದಿದ್ದಾರೆ. ಜಾತಿಗಣತಿ ವರದಿ ನೀಡಿದ ಆದರೆ ಇದೀಗ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಕೊಟ್ಟ ಜಾತಿ ಗಣತಿ ವರದಿ ನೈಜವಾಗಿದೆ. ವೈಜ್ಞಾನಿಕವಾಗಿಯೆ ಇದೆ. ವರದಿ ನೋಡದೆ, ಸುಮ್ಮನೆ ಅವೈಜ್ಞಾನಿಕವಾಗಿದೆ ಎನ್ನುವುದು ಸರಿಯಲ್ಲ. 40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಜಾತಿ, ಲಿಂಗ, ಧರ್ಮ, ಆಸ್ತಿ – ಪಾಸ್ತಿ ಎಲ್ಲಾ ಸೇರಿ 55 ಪ್ರಶ್ನೆ ಕೇಳಿದ್ದೇವೆ. ಕುಲಂಕುಷವಾಗಿ ಅಂಕಿ – ಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದೆ. ರಾಜ್ಯ ಸರದಕಾರ ಈ ವರದಿಯನ್ನು ನೋಡಿದ ಬಳಿಕ ತೀರ್ಮಾನ ಮಾಡಲಿ. ಎರಡು ಸಮುದಾಯಗಳು ವಿರೋಧ ಮಾಡಬಹುದು. ಆದರೆ ವರದಿಯನ್ನು ಮೊದಲು ನೋಡಲಿ. ಆ ಬಳಿಕ ಅದು ಸರಿಯಿಲ್ಲ ಎಂದಾದರೇ ವಿರೋಧ ಮಾಡಲಿ.

ಜಾತಿಗಣತಿ ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಎನ್ನುವುದು ಸರಿಯಲ್ಲ. ವರದಿಯ ಒಂದು ವಾಲ್ಯೂಮ್ ಗೆ ಸಹಿ ಹಾಕಿಲ್ಲ ಅಷ್ಟೇ. ಮೂಲ ಪ್ರತಿ ಕಾಣೆಯಾಗಿರುವುದು ನಂಗೆ ಗೊತ್ತಿಲ್ಲ. 2019ರಲ್ಲಿ ನಾನು ವರದಿ ಕೊಟ್ಟಿದ್ದು, ನಾನು ಇದ್ದಾಗ ಮೂಲಪ್ರತಿ ಇತ್ತು‌. ಇದು ಜಾತಿ ಗಣತಿ ಅಲ್ಲ. ಸಾಮಾಜಿಕ ಹಾಗೂ ಶೈಕ್ಷಣಿಕ ವರದಿ. ಕುಮಾರಸ್ವಾಮಿ ಅವರಿಗೆ ಸಮಯ ಕೆಳಿದ್ವಿ. ಆದರೆ ಅವರು ಸಮಯ ಕೊಡಲಿಲ್ಲ ಎಂದು ವರದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!