Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣತಂತ್ರ ದಿವಸ ಅದ್ಧೂರಿ ಆಚರಿಸದಿರುವುದು ನೋವಿನ ಸಂಗತಿ : ಎಚ್.ಆಂಜನೇಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜ.26 : ಇಡೀ ದೇಶದ ಸಮಗ್ರ ಅಭಿವರದ್ಧಿಗೆ ಸರ್ವಶ್ರೇಷ್ಠ ಸಂವಿಧಾನ ರಚಿಸಿ 75 ವರ್ಷ ಕಳೆದಿದೆ. ಇಂತಹ ಮಾಹನ್ ದಿನವನ್ನು ಕೇಂದ್ರ ಸರ್ಕಾರ ಅದ್ಧೂರಿಯಾಗಿ ಆಚರಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ ಎಚ್.ಆಂಜನೇಯ ಬೇಸರ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹಾರ್ ಲಾಲ್  ನೆಹರೂರವರು ಭಾರತದ ಮೊದಲನೇ ಕಾನೂನು ಮಂತ್ರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನೇಮಕ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ರವರು ತಮ್ಮ ಜವಬ್ದಾರಿಯನ್ನು ಅರಿತು ವಿವಿಧ ದೇಶಗಳನ್ನು ಸುತ್ತಿ ಅಲ್ಲಿನ  ಕಾನೂನನ್ನು ಅಧ್ಯಯನ ಮಾಡಿ ಸರ್ವರ ಏಳಿಗೆಗೆ ಅವರ ಹಿತಾಸಕ್ತಿಯನ್ನು ಕಾಪಾಡಲಿಕ್ಕೆ ಯಾವ ಕಾನೂನು ಬೇಕು ಎಂಬುದನ್ನು ಅರಿತು ಇಡೀ ವಿಶ್ವವೇ ಮೆಚ್ಚುವಂತ ಒಂದು ಸಂವಿಧಾನವನ್ನು ರಚಿಸಿ, ಅರ್ಪಿಸಿ ಇಂದಿಗೆ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನವನ್ನು ದೇಶದ ಪ್ರಧಾನಿಯವರು ರಾಮ ಮಂದಿರದ ಉದ್ಘಾಟನೆ ಯಾವ ರೀತಿ ಮಾಡಿದರೋ ಅದೇ ರೀತಿ ಅದ್ಧೂರಿಯಾಗಿ ಆಚರಿಸಬೇಕಿತ್ತು. ಅದು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವತಂತ್ರ ಲಭಿಸಲು ಕಾರಣರಾದ ಮತ್ತು ದೇಶವನ್ನು ಅಭಿವೃದ್ಧಿಯತ್ತ ಸಾಗಲು ಕಾರಣರಾದ ಮಹಾತ್ಮಗಾಂಧಿ, ಪಂಡಿತ್ ಜವಹಾರ್ ಲಾಲ್ ನೆಹರು, ಲಾಲ್ ಬಹದೂರ್ ಶಾಸ್ತ್ರಿ, ಇಂದಿರಾಗಾಂಧಿಯವರನ್ನು ನೆನಪೇ ಇಲ್ಲದಂತಹ ಸ್ಥಿತಿ ನಿರ್ಮಾಣ ಮಾಡುತ್ತಿರುವುದು ದುಃಖಕರ ಎಂದರು.

ಬ್ರಿಟೀಷರು 300 ವರ್ಷಗಳ ಕಾಲ ಈ ರಾಷ್ಟ್ರವನ್ನು ಆಳ್ವಿಕೆ ನಡೆಸಿ ನಮ್ಮ ಸಂಪತ್ತನ್ನೆಲ್ಲ ದೋಚಿಕೊಂಡು ಹೋದರು. ಗುಲಾಮಗಿರಿಗೆ ಒಳಪಟ್ಟಿದ್ದ ಜನರನ್ನು ಬಿಡುಗಡೆಗೊಳಿಸಲು ಮಹಾತ್ಮಗಾಂಧಿ ಅವರ ನೇತೃತ್ವದಲ್ಲಿ ಚಳವಳಿ ನಡೆದಿದ್ದರಿಂದ ನಮಗೆ ಸ್ವಾತಂತ್ರಯ ಲಭಿಸಿತು.
ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರು ಅವರು ಪ್ರಧಾನಮಂತ್ರಿ ಆದ ಸಮಯದಲ್ಲಿ ಉಡುವ ಬಟ್ಟೆ ಹರಿದರೆ ಅದನ್ನು ಹೊಲಿಗೆ ಹಾಕಿಸುವ ಯಂತ್ರವೂ ಸೇರಿದಂತೆ ವಿಮಾನ, ಸುಸಜ್ಜಿತ ರಸ್ತೆಯೂ ನಮ್ಮಲ್ಲಿ ಇರಲಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸದೃಢ ಭಾರತದ ನಿರ್ಮಾಣಕ್ಕೆ ನಾಂದಿ ಹಾಡಿದರು ಎಂದು ನೆನಪಿಸಿದರು.

ಸ್ವತಂತ್ರ ಮಾಡುವ ಚಳವಳಿಯಲ್ಲಿ ಬ್ರಿಟೀಷರ ಗುಂಡಿಗೆ ಎದೆಗೊಡುವ ಸಮಯದಲ್ಲಿ ಇವರು ಪರಿಶಿಷ್ಟ ಜಾತಿ, ಪಂಗಡದವರು, ಮುಸ್ಲಿಮರು, ಹಿಂದೂ, ಸಿಖ್ಖರು ಎನ್ನುವುದನ್ನು ನೋಡಲಿಲ್ಲ. ನಮಗೆ ಭಾರತ ಬ್ರಿಟೀಷರ ಸಂಕೋಲೆಯಿಂದ ಮುಕ್ತಿ ಹೊಂದಿ ಸ್ವತಂತ್ರ ಆಗಬೇಕು.ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ತೊಲಗಬೇಕು ಎನ್ನುವ ಸಂಕಲ್ಪದಿಂದ ನಮ್ಮ ಪೂಜ್ಯರ ಹೋರಾಟ ಮತ್ತು ತ್ಯಾಗದ ಫಲವಾಗಿ ಸ್ವತಂತ್ರ ಸಿಕ್ಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾ ಮಾಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಜಿಪಂಮಾಜಿ ಸದಸ್ಯ ಆರ್.ನರಸಿಂಹರಾಜು, ಸಂಪತ್ ಕುಮಾರ್ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!