Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಕ್ಕ ಕೋಟಿ ಕೋಟಿ ಹಣ ಬಿಜೆಪಿಗೆ ಸೇರಿದ್ದು ಎಂಬುದೇ ಹಾಸ್ಯಾಸ್ಪದ : ಸಚಿವ ಎ ನಾರಾಯಣಸ್ವಾಮಿ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.16 : ರಾಜ್ಯದಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಅದರ ಪರಿಣಾಮ ಕಂಟ್ರಾಕ್ಟರ್ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಹಣ ಸಿಕ್ಕಿದೆ. ಈ ಹಣ ಬಿಜೆಪಿಗೆ ಸೇರಿದ್ದು, ಎಂದು ಹಲವರು ಹೇಳುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಇದೊಂದು ಹಾಸ್ಯಸ್ಪದ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಹಣ ಸಂಗ್ರಹವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಗೆ ಹಣ ನೀಡಲು ಪೈಪೋಟಿ ನಡೆಯುತ್ತಿದೆ. ಇಬ್ಬರ ಪೈಪೋಟಿ ನಡುವೆ ಹಣದ ವಿಷಯ ಬಯಲಾಗಿರಬಹುದು.

ಭದ್ರಾ ಯೋಜನೆಗೆ 1.950 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಕಮಿಷನ್ ಬಂದ ಬಳಿಕ ಹಣ ಬಿಡುಗಡೆಗೆ ಸೂಚಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ. ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗ ಭೂಸ್ವಾಧೀನಕ್ಕೆ ಹಣ ಬಿಡುಗಡೆ ಮಾಡಿಲ್ಲ. ಯಾರು ಕಲೆಕ್ಷನ್ ಗೆ ಕರೆ ಮಾಡುತ್ತಾರೆಂದು ಜಿಲ್ಲೆಗೆ ಗೊತ್ತಿದೆ. ಕಮಿಷನ್ ಬೇಕೆಂದು ಕರೆ ಮಾಡುತ್ತಾರೆಂದು ಅಧಿಕಾರಗಳೇ ಹೇಳುತ್ತಾರೆ.

ನಿಮ್ಮ ಕಾಲದಲ್ಲಿ ಭದ್ರಾ ಯೋಜನೆ ಆಗದಿದ್ದರೆ ಜಿಲ್ಲೆಗೆ ಯೋಜನೆಯೇ ಬರಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ
ಡಿಸಿ ಎದುರಲ್ಲೇ ಅಧಿಕಾರಿಗಳು ಹೇಳಿದ್ದಾರೆ. ನಿಮ್ಮ ಯೋಗ್ಯತೆ ಅಧಿಕಾರಿಗಳಿಗೆ ಗೊತ್ತಾಗಿದೆ. ಕಾಂಗ್ರೆಸ್ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹಿರು. ಸರ್ಕಾರ ದಿವಾಳಿ ಆಗಿದೆ ಎಂದು ಸಿಎಂ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ. ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment