Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಲ್ಲಿ ಕನ್ನಡ ನಾಡು ನುಡಿ ಬಗ್ಗೆ ಅಭಿಮಾನ ಮೂಡಿಸುವ ಹೊಣೆಗಾರಿಕೆ ಶಿಕ್ಷಕರು ಹಾಗೂ ಪೋಷಕರದ್ದು : ಶಾಸಕ ಡಾ.ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ, ಡಿಸೆಂಬರ್.01 : ಶಿಕ್ಷಣದ ಜೊತೆ ಮಕ್ಕಳಲ್ಲಿ ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಸಂಸ್ಕಾರ ಬಗ್ಗೆ ಅಭಿಮಾನ ಮೂಡಿಸುವ ಹೊಣೆಗಾರಿಕೆ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ಹೊಳಲ್ಕೆರೆ ತಾಲ್ಲೂಕಿನ ತರಳಬಾಳು ನಗರ ಮುತ್ತುಗದೂರು ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೊಳಲ್ಕೆರೆ ಮತ್ತು ಬಿ.ದುರ್ಗ ಹೋಬಳಿ ಘಟಕ ತರಳಬಾಳು ನೌಕರರ ಕ್ಷೇಮಾಭಿವೃದ್ದಿ ಸಂಘ, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ದತ್ತಿ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇದು ಪರಮ ಪವಿತ್ರವಾದ ಸ್ಥಳ. ಇಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಅತ್ಯುತ್ತಮ ಶಿಕ್ಷಕರು ಹಾಗೂ ಪ್ರಾಚಾರ್ಯರುಗಳಿದ್ದಾರೆ. ಸಲಹಾ ಸಮಿತಿ ಕೂಡ ರಚನೆಯಾಗಿದೆ. ಕೃಷಿಕರಿಗೆ ಯಾರು ಹೆಣ್ಣು ಕೊಡಲು ಮುಂದೆ ಬರುವುದಿಲ್ಲ. ಹಾಗಾಗಿ ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ಕೊಡಿಸಿ ಮಕ್ಕಳ ಲಾಲನೆ ಪೋಷಣೆ ಮುಖ್ಯ. ಎಷ್ಟೆ ಕಷ್ಟ ಬಂದರೂ ಮಕ್ಕಳನ್ನು ಶಾಲೆಯಿಂದ ಬಿಡಿಸಬೇಡಿ. ಮಕ್ಕಳು ಮನೆಯಲ್ಲಿ ಇರುವ ಸಮಯದಲ್ಲಿ ತಾಯಂದಿರು ಧಾರವಾಹಿಗಳನ್ನು ನೋಡಿಕೊಂಡು ಕುಳಿತುಕೊಂಡರೆ ಮಕ್ಕಳ ಮನಸ್ಸು ಬೇರೆ ಕಡೆ ಸೆಳೆದಂತಾಗುತ್ತದೆ.

ಚಿಕ್ಕಂದಿನಿಂದಲೇ ಶ್ರದ್ದೆಯಿಂದ ಓದಿದರೆ ಮುಂದೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಮಕ್ಕಳು ಕೇವಲ ಶಾಲೆಗೆ ಹೋಗಿ ಬಂದರೆ ಸಾಲದು. ತಂದೆ-ತಾಯಂದಿರು ಮಕ್ಕಳ ಕಡೆ ನಿಗಾಯಿಟ್ಟು ಶಾಲೆಯಲ್ಲಿ ಬೋಧಿಸಿದ ಪಾಠವನ್ನು ಸರಿಯಾಗಿ ಕಲಿತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಹೊಳಲ್ಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಿವಮೂರ್ತಿ, ತರಳಬಾಳು ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಎಂ.ದೇವರಾಜ್, ಪದವಿಪೂರ್ವ ಕಾಲೇಜು ಸಲಹಾ ಸಮಿತಿ ಅಧ್ಯಕ್ಷ ಎಂ.ಕೆ.ರುದ್ರಪ್ಪ, ಮರಳುಸಿದ್ದಯ್ಯ, ಕು.ಡಾ.ಇಂಚರ ಪಾಂಡೋಮಟ್ಟಿ, ಜೆ.ಪಿ.ಸಂತೋಷ, ಜೆ.ಎ.ದೇವರಾಜಯ್ಯ, ಎಂ.ಬಿ.ಸಿದ್ದೇಶ್, ಡಿ.ಮೋಹನ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರುಗಳು, ತರಳಬಾಳು ಸರ್ಸರಿ ಮತ್ತು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಬೋಧಕ, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!