Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭಾರತ ಸೇವಾದಳದ ದ್ಯೇಯೋದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ಶಿಕ್ಷಕರ ಜವಾಬ್ದಾರಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್ .19 :ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲಾಡ್ಯರನ್ನಾಗಿಸಲು ಅವರಲ್ಲಿ ಶಿಸ್ತು, ದೇಶಭಕ್ತಿ, ಸೇವಾ ಮನೋಭಾವನೆಯನ್ನು ಮತ್ತು ಯೋಗ, ಕ್ರೀಡೆಯಂತಹ ವಿಶೇಷ ಚಟುವಟಿಕೆಗಳನ್ನು ನಡೆಸಲು ಶಿಕ್ಷಕರಿಗೆ ಪುನಶ್ಚೇತನ ತರಬೇತಿಯ ಅಗತ್ಯತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಅಭಿಪ್ರಾಯಪಟ್ಟರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸೇವಾ ದಳದ ಶತಮಾನೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.  ಶಾಲೆಗಳಲ್ಲಿ ಕಡ್ಡಾಯವಾಗಿ ಸೇವಾದಳ ಘಟಕಗಳನ್ನು ಆರಂಭಿಸಬೇಕು, ದೈಹಿಕ ಶಿಕ್ಷಕರು ನಿರುತ್ಸಾಹಿಗಳಾಗದೆ ಭಾರತ ಸೇವಾದಳ ಸ್ಕೌಟ್ಸ್ ,ಗೈಡ್ಸ್ ಸಂಸ್ಥೆಗಳ ದೇಯೋದ್ಧೇಶಗಳನ್ನು ಅರ್ಥ ಮಾಡಿಕೊಂಡು.ಮಕ್ಕಳಿಗೆ ಸೇವಾದಳ ಶಿಕ್ಷಣವನ್ನು ನೀಡಬೇಕು, ಗಾಂಧೀಜಿಯವರ ಶಾಂತಿ ಸೌಹಾರ್ದತೆ ಹಾಗೂ ಅಹಿಂಸ ತತ್ವಗಳು ಸಮಾಜದಲ್ಲಿ ಬೇರೂರುವಂತೆ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಭಾರತೀಯ ಸೇವಾದಳದ ವಲಯ ಸಂಘಟಕ ಅಣ್ಣಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತ ಸೇವಾದಳವನ್ನು ಉಳಿಸಿ ಬೆಳೆಸಲು ಶಿಕ್ಷಕರು ಮುಂದಾಗಬೇಕು ದೇಶದಲ್ಲಿ ಅತ್ಯಂತ ಅತ್ಯುತ್ತಮ ಸಂಸ್ಥೆಯಾದ ಭಾರತ ಸೇವಾದಳ ಸ್ವಾರ್ಥಕ್ಕಾಗಿ ಹುಟ್ಟಿದ್ದಲ್ಲ ಸ್ವಾತಂತ್ರ್ಯಕ್ಕಾಗಿ ದೇಶಭಕ್ತರನ್ನು ಹೋರಾಟಗಾರರನ್ನು ರಾಷ್ಟ್ರ ಪ್ರೇಮಿಗಳನ್ನು ತಯಾರು ಮಾಡಲು ಹುಟ್ಟಿದ ಸಂಸ್ಥೆ, ಲಕ್ಷಾಂತರ ದೇಶಭಕ್ತರು ಮತ್ತು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಕೊಟ್ಟ ಭಾರತ ಸೇವಾದಳ ಇತ್ತೀಚಿನ ವರ್ಷಗಳಲ್ಲಿ ಸೊರಗುತ್ತಿದ್ದು ಅದನ್ನು ಉಳಿಸಿ ಬೆಳೆಸುವ ಹೊಣೆ ಸೇವಾದಳ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುನಿಲ್ ನಾಯಕ್ ಉಪಾಧ್ಯಕ್ಷ ಪಾಲಯ್ಯ ಸಿದ್ದೇಶ್ ರಾಮ ನಾಯಕ್ ರಾಜಣ್ಣ ತಿಪ್ಪೇಸ್ವಾಮಿ ಅಬ್ದುಲ್ ರಜಾಕ್ ವೇಲೂರು ಪ್ರಾಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment