Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಯವರಿಗೆ ಪರಿಚಯಿಸುವ ಜವಾಬ್ದಾರಿ ಯುವಜನತೆಯದ್ದಾಗಿದೆ : ಡಾ.ಭರತ್ ಪಿ ಬಿ

---Advertisement---

 

ಚಿತ್ರದುರ್ಗ, (ಮಾ.24) : ಕಳೆದು ಹೋಗುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಯವರಿಗೆ ಪರಿಚಯಿಸುವ ಜವಾಬ್ದಾರಿ ಯುವಜನತೆಯದ್ದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಭರತ್ ಪಿ ಬಿ ಹೇಳಿದರು.

ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಫೂರ್ತಿ-2023 ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಸ್ಫೂರ್ತಿ-2023ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅದೇ ಉತ್ಸಾಹವನ್ನು ತೋರಿಸುತ್ತಿರುವುದು ಸಂತಸದ ವಿಚಾರ.

ಆಧುನಿಕ, ಪಾಶ್ಚಾತ್ಯ ಸಂಸ್ಕøತಿಗೆ ಮಾರು ಹೋಗದೆ ನಮ್ಮ ನುಡಿ, ನೆಲ, ಜಲ, ಸಂಸ್ಕøತಿಯನ್ನು ಇತರರಿಗೆ ಪರಿಚಯಿಸಬೇಕು. ಈ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳ ಈ ಪ್ರಯತ್ನ ಶ್ಲಾಘನೀಯ ಎಂದು ನುಡಿದರು.

ಈ ಸಂದರ್ಭದಲ್ಲಿ ಸ್ಫೂರ್ತಿ-2023 ಮುಖ್ಯಸಂಚಾಲಕರಾದ ಡಾ. ಶ್ರೀಶೈಲ ಜೆ ಎಂ, ವಿವಿಧ ಇಲಾಖಾ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸ್ಫೂರ್ತಿ-2023ರ ಅಂಗವಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿದ ರೀತಿಯ ದೇಸೀಯ ವೇಷಭೂಷಣ, ಉಡುಗೆತೊಡುಗೆ ಧರಿಸಿ ಸಂಭ್ರಮಿಸಿದರು.

ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಗಳಾದ ಪಂಚೆ, ಶಲ್ಯ, ಪೇಟ, ಜುಬ್ಬಾ, ಪೈಜಾಮು ಧರಿಸಿ ಗಮನ ಸೆಳೆದರೆ,  ರೇಷ್ಮೆ ಸೀರೆ, ಮೊಗ್ಗಿನ ಜಡೆ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು  ಭಾರತೀಯ ಸಂಸ್ಕøತಿಯನ್ನು ಬಿಂಬಿಸುವ ನಾರಿಯರಂತೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ಕುಣಿದು ಕುಪ್ಪಳಸಿ ಕ್ಯಾಂಪಸ್‍ನಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿ ನೃತ್ಯ ಮಾಡಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಹರ್ಷಿತಾ  ಪ್ರಾರ್ಥಿಸಿ, ಶ್ವೇತಾ ತಿಗಡಿ, ವಾಸುದೇವ ಎಂ ಎನ್ ನಿರೂಪಿಸಿ ಅಲಿಮಾ ಮಿಸ್ಬಾ ವಂದಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...