ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸ್ಟಾಟರ್ಜಿ ಬಳಸುತ್ತಿದ್ದಾರೆ. ಅದರಲ್ಲೂ ಆಪರೇಷನ್ ಹಸ್ತ, ಆಪರೇಷನ್ ಕಮಲದ ವಿಚಾರ ಜೋರಾಗಿದೆ. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಡಿಕೆ ಶಿವಕುಮಾರ್ ಆಫರ್ ನೀಡಿರುವುದು ಸತ್ಯ ಎಂದು ಜಿಟಿ ದೇವೇಗೌಡ ಒಪ್ಪಿಕೊಂಡಿದ್ದಾರೆ.
ಇತ್ತಿಚೆಗೆ ಜಿ ಟಿ ದೇವೇಗೌಡ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಈ ಭೇಟಿ ಹಿಂದೆ ಸಾಕಷ್ಟು ಚರ್ಚೆ ಶುರುವಾಗಿತ್ತು. ಇದೀಗ ಈ ಭೇಟಿ ಬಗ್ಗೆ ಹಾಗೂ ನಡೆದ ಚರ್ಚೆ ಬಗ್ಗೆ ಜಿ ಟಿ ದೇವೇಗೌಡ ಅವರು ಸತ್ಯ ಹೊರ ಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ನನ್ನನ್ನು ಭೇಟಿಯಾಗಿದ್ದು ನಿಜ. ನನಗೆ ಪಕ್ಷಕ್ಕೆ ಬರುವಂತೆ ಮತ್ತೊಮ್ಮೆ ಆಫರ್ ನೀಡಿದ್ದಾರೆ. ಸದಾಶಿವನಗರದ ನನ್ನ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಅವರ ಜೊತೆಗೆ ಎಸ್ ಟಿ ಸೋಮಶೇಖರ್ ಸೇರಿದಂತೆ ಬೇರೆ ಬೇರೆ ಶಾಸಕರು ಬಂದಿದ್ದರು ಎಂದಿದ್ದಾರೆ.

ಇದೆ ವೇಳೆ ಅವಕಾಶವಿದೆ, ಕಾಂಗ್ರೆಸ್ ಪಕ್ಷಕ್ಕೆ ಬರುವ ಮನಸ್ಸು ಮಾಡಿ. ನಮ್ಮದೆ ಸರ್ಕಾರವಿದೆ. ನಿಮಗೂ ಅಧಿಕಾರದ ಅವಕಾಶ ಸಿಗಲಿದೆ ಎಂದಿದ್ದರು. ಆದರೆ ನಾನು, ಕೋರ್ ಕಮಿಟಿ ಅಧ್ಯಕ್ಷನಾಗಿ ಜನತಾದಳ ಕಟ್ಟುತ್ತಿದ್ದೇನೆ. ಈಗಾಗಲೇ ನಿಮ್ಮಲ್ಲೇ 135 ಶಾಸಕರಿದ್ದಾರೆ ಶಾಸಕರನ್ನು ಸೇರಿಸಿಕೊಳ್ಳುವ ಅಗತ್ಯ ನಿಮಗೆ ಇಲ್ಲ ಎಂದು ಜಿ.ಟಿ.ದೇವೇಗೌಡರು ಹೇಳಿದರು.
ಕಾಂಗ್ರೆಸ್ ಪಕ್ಷ ಸೇರುವ ವಿಚಾರವನ್ನು ನಿನಗೆ ಬಿಟ್ಟಿದ್ದೇನೆ. ನಾನು ಒತ್ತಾಯ ಮಾಡಲ್ಲ. ನಿನ್ನ ಇಷ್ಟ ನೋಡಪ್ಪ ಎಂದು ಹೇಳಿ ಹೋಗಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















