Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರದ ಆಫರ್ ಕೊಟ್ಟಿದ್ದು ನಿಜ : ಡಿಕೆಶಿ ಭೇಟಿ ರಹಸ್ಯ ಬಿಚ್ಚಿಟ್ಟ ಜಿಟಿ ದೇವೇಗೌಡ

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸ್ಟಾಟರ್ಜಿ ಬಳಸುತ್ತಿದ್ದಾರೆ. ಅದರಲ್ಲೂ ಆಪರೇಷನ್ ಹಸ್ತ, ಆಪರೇಷನ್ ಕಮಲದ ವಿಚಾರ ಜೋರಾಗಿದೆ. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಡಿಕೆ ಶಿವಕುಮಾರ್ ಆಫರ್ ನೀಡಿರುವುದು ಸತ್ಯ ಎಂದು ಜಿಟಿ ದೇವೇಗೌಡ ಒಪ್ಪಿಕೊಂಡಿದ್ದಾರೆ.

ಇತ್ತಿಚೆಗೆ ಜಿ ಟಿ ದೇವೇಗೌಡ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಈ ಭೇಟಿ ಹಿಂದೆ ಸಾಕಷ್ಟು ಚರ್ಚೆ ಶುರುವಾಗಿತ್ತು. ಇದೀಗ ಈ ಭೇಟಿ ಬಗ್ಗೆ ಹಾಗೂ ನಡೆದ ಚರ್ಚೆ ಬಗ್ಗೆ ಜಿ ಟಿ ದೇವೇಗೌಡ ಅವರು ಸತ್ಯ ಹೊರ ಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ನನ್ನನ್ನು ಭೇಟಿಯಾಗಿದ್ದು ನಿಜ. ನನಗೆ ಪಕ್ಷಕ್ಕೆ ಬರುವಂತೆ ಮತ್ತೊಮ್ಮೆ ಆಫರ್ ನೀಡಿದ್ದಾರೆ. ಸದಾಶಿವನಗರದ ನನ್ನ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಅವರ ಜೊತೆಗೆ ಎಸ್ ಟಿ ಸೋಮಶೇಖರ್ ಸೇರಿದಂತೆ ಬೇರೆ ಬೇರೆ ಶಾಸಕರು ಬಂದಿದ್ದರು ಎಂದಿದ್ದಾರೆ.

ಇದೆ ವೇಳೆ ಅವಕಾಶವಿದೆ, ಕಾಂಗ್ರೆಸ್ ಪಕ್ಷಕ್ಕೆ ಬರುವ ಮನಸ್ಸು ಮಾಡಿ. ನಮ್ಮದೆ ಸರ್ಕಾರವಿದೆ. ನಿಮಗೂ ಅಧಿಕಾರದ ಅವಕಾಶ ಸಿಗಲಿದೆ ಎಂದಿದ್ದರು. ಆದರೆ ನಾನು, ಕೋರ್ ಕಮಿಟಿ ಅಧ್ಯಕ್ಷನಾಗಿ ಜನತಾದಳ ಕಟ್ಟುತ್ತಿದ್ದೇನೆ. ಈಗಾಗಲೇ ನಿಮ್ಮಲ್ಲೇ 135 ಶಾಸಕರಿದ್ದಾರೆ ಶಾಸಕರನ್ನು ಸೇರಿಸಿಕೊಳ್ಳುವ ಅಗತ್ಯ ನಿಮಗೆ ಇಲ್ಲ ಎಂದು ಜಿ.ಟಿ.ದೇವೇಗೌಡರು ಹೇಳಿದರು.

ಕಾಂಗ್ರೆಸ್ ಪಕ್ಷ ಸೇರುವ ವಿಚಾರವನ್ನು ನಿನಗೆ ಬಿಟ್ಟಿದ್ದೇನೆ. ನಾನು ಒತ್ತಾಯ ಮಾಡಲ್ಲ. ನಿನ್ನ ಇಷ್ಟ ನೋಡಪ್ಪ ಎಂದು ಹೇಳಿ ಹೋಗಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ವಿಚಾರದ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!