Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ, ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

Facebook
Twitter
Telegram
WhatsApp

ಕಾವೇರಿಗಾಗಿ ಇಂದು ಕರ್ನಾಟಕ ಬಂದ್ ಮಾಡಿ ರೈತರು, ಕನ್ನಡಪರ ಸಂಘಟನೆಗಳು ಆಕ್ರೋಶ ಹೊರ ಹಾಕಿದ್ದಾರೆ. ಈ ಮಧ್ಯೆ ತಮಿಳುನಾಡಿಗೆ ಪ್ರತಿದಿನವೂ ಕಾವೇರಿ ನೀರು ಹರಿಯುತ್ತಲೇ ಇದೆ. ಹೋರಾಟದ ನಡುವೆ ತಮಿಳು ನಟ ಸಿದ್ದಾರ್ಥ್ ಅವರಿಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕಾಶ್ ರಾಜ್ ಕ್ಷಮೆಯಾಚಿಸಿದ್ದಾರೆ.

ತಮ್ಮ ತಮಿಳಿನ ಸಿನಿಮಾದ ಪ್ರಚಾರಕ್ಕಾಗಿ ಸಿದ್ಧಾರ್ಥ್ ಬೆಂಗಳೂರಿಗೆ ಬಂದಿದ್ದರು. ಅದರ ಪ್ರೆಸ್ ಮೀಟ್ ಮಾಡುವಾಗಲೇ, ಕನ್ನಡಪರ ಸಂಘಟನೆಗಳು ಬಂದು, ಪ್ರೆಸ್ ಮೀಟ್ ತಡೆದರು. ಸಿದ್ಧಾರ್ಥ್ ಏನು ಹೇಳುವುದಕ್ಕೂ ಬಿಡಲಿಲ್ಲ. ಕಡೆಗೆ ಸಿದ್ಧಾರ್ಥ್ ಕೈ ಮುಗಿದು ಅಲ್ಲಿಂದ ಹೊರ ನಡೆದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿತ್ತು. ಇದೀಗ ಈ ವಿಡಿಯೋ ಶೇರ್ ಮಾಡಿರುವ ಪ್ರಕಾಶ್ ರಾಜ್, ಸಿದ್ದಾರ್ಥ್ ಗೆ ಕ್ಷಮೆ ಕೇಳಿದ್ದಾರೆ.

‘ಕಾವೇರಿನಮ್ಮದು .. ಹೌದು .. ನಮ್ಮದೇ.. ಆದರೆ .. ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನು .. ನಾಯಕರನ್ನು ಪ್ರಶ್ನಿಸದೆ.. ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ.. ಹೀಗೆ ಅಸಹಾಯಕ ಜನಸಾಮಾನ್ಯರನ್ನು.. ಕಲಾವಿದರನ್ನು ಹಿಂಸಿಸುವುದು ತಪ್ಪು ..ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಕ್ಷಮಿಸಿ’ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಕಾವೇರಿಗಾಗಿ ಸ್ಯಾಂಡಲ್ ವುಡ್ ಕೂಡ ಕೈಜೋಡಿಸಿದೆ. ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ. ಕರ್ನಾಟಕ ಫಿಲ್ಮ್ ಚೇಂಬರ್ ನಿಂದ ಪ್ರತಿಭಟನೆಯನ್ನು ಶುರು ಮಾಡಲಿದ್ದಾರೆ. ಈಗಾಗಲೇ ಎಲ್ಲಾ ಬಿಗ್ ಸ್ಟಾರ್ ಗಳು ಸೋಷಿಯಲ್ ಮೀಡಿಯಾ ಮೂಲಕ ಕಾವೇರಿಗಾಗಿ ತಮ್ಮ ಬೆಂಬಲ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!