ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಬಾರೀ ಮಳೆ..!

suddionenews
1 Min Read

 

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿದೆ. ಆರಂಭದಲ್ಲಿ ಕೈಕೊಟ್ಟ ಮಳೆ ನಿಧಾನವಾಗಿ ಜೋರಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದ್ದು, ಜುಲೈ 13ರಿಂದ ಮೂರು ದಿನಗಳ ಕಾಲ ಇನ್ನು ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಕಡೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಆರಂಭದಿಂದಲೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇದೆ. ಈಗ ಮಳೆ ಬ್ರೇಕ್ ನೀಡಿತ್ತು ಎನ್ನುವಷ್ಟರಲ್ಲಿ ಮತ್ತೆ ಮೂರು ದಿನಗಳ ಕಾಲ ಜೋರಾಗಿ ಹಿಡಿಯಲಿದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕರಾವಳಿ ಭಾಗದಲ್ಲಿ ಮೂರು ದಿನಗಳ ಕಾಲ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊರಗೆ ಹೋಗುವ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *