Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನೇ ಎದುರಾದರೂ ಕುಗ್ಗಬೇಡ ಎಂದು ರಿಷಭ್ ಶೆಟ್ಟಿಗೆ ಅಭಯ ನೀಡಿದ ದೈವ

Facebook
Twitter
Telegram
WhatsApp

ಮಂಗಳೂರು: ತುಳುನಾಡಿನ ದೈವಗಳ ವಿಚಾರವನ್ನಿಟ್ಟುಕೊಂಡು ಮಾಡಿದ್ದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲೂ ಸದ್ದು ಮಾಡಿತ್ತು. ರಿಷಭ್ ಶೆಟ್ಟಿ ಅವರ ಮೇಲಿನ ನಿರೀಕ್ಷೆ ಹೆಚ್ಚಾಗಿತ್ತು. ಕಾಂತಾರ ಸಿನಿಮಾದಿಂದ ಹಲವು ಅವಾರ್ಡ್ ಗಳು ಕೂಡ ರಿಷಭ್ ಶೆಟ್ಟಿ ಅವರ ಹೆಗಲು ಸೇರಿದವು. ಇದೀಗ ಕಾಂತಾರ ಸಿನಿಮಾದ ಪ್ರಿಕ್ವೇಲ್ ಗೆ ದೈವಗಳ ಆಶೀರ್ವಾದ ಸಿಕ್ಕಿದೆ.

ಇಂದು ರಿಷಭ್ ಶೆಟ್ಟಿ, ಮಂಗಳೂರಿನ ವಜ್ರದೇಹಿ ಮಠಕ್ಕೆ ಭೇಟಿ ನೀಡಿದ್ದರು‌. ಈ ವೇಳೆ ಕಾಂತಾರಾ ಮೊದಲ ಅಧ್ಯಾಯಕ್ಕೆ ದೈವದಿಂದ ಅಭಯ ಸಿಕ್ಕಿದೆ. ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮೂಲಕ ಸೂಚನೆ ನೀಡಿದೆ. ಏನೇ ಎದುರಾದರೂ ಕುಗ್ಗಬೇಡ ಎಂದು ತಿಳಿಸಿದೆ. ದೈವದ ಆಶೀರ್ವಾದ ಸಿಕ್ಕಿದ್ದಕ್ಕೆ ರಿಷಭ್ ಶೆಟ್ಟಿ ಅಂಡ್ ಟೀಂ ಫುಲ್ ಖುಷಿಯಾಗಿದ್ದಾರೆ. ಇನ್ನು ಕಾಂತಾರ ಸಿನಿಮಾ ಮಾಡುವುದಕ್ಕೂ ಮುನ್ನವೂ ದೈವದ ಅನುಮತಿ ಪಡೆದಿದ್ದರು.

ರಿಷಭ್ ಶೆಟ್ಟಿ ಅವರು ಈ ಹಿಂದೆ ವಜ್ರದೇಹಿ ಸ್ವಾಮೀಜಿ ಭೇಟಿಯಾದ ಸಂದರ್ಭದಲ್ಲಿ ಅವರು ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ವಜ್ರದೇಹಿ ಮಠದ ದೈವ ಕೋಲ ವೀಕ್ಷಿಸುವ ಇಚ್ಛೆಯನ್ನು ಹೇಳಿಕೊಂಡಿದ್ದರು. ಹೀಗಾಗಿ ಕೋಲಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ರಿಷಬ್ ಶೆಟ್ಟಿಯನ್ನು ಆಹ್ವಾನಿಸಿದ್ದರು. ಹೀಗಾಗಿ ರಿಷಬ್ ಇದರಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ರಿಲೀಸ್ ಆದ ಮೇಲೆ ಕೋಟಿ ಕೋಟಿ ಹಣವನ್ನು ಬಾಚಿಕೊಂಡಿದೆ. ಕಾಂತಾರ ಮುಂದುವರೆದ ಭಾಗವನ್ನು ನೋಡಬೇಕೆಂಬ ಆಸೆಯನ್ನು ಪ್ರೇಕ್ಷಕರು ವ್ಯಕ್ತಪಡಿಸಿದ್ದರು. ಹೀಗಾಗಿ ಅದರ ಹಿಂದಿನ ಭಾಗವನ್ನು ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಸಿನಿಮಾ ಪ್ರಿಕ್ವೇಲ್ ಶೂಟ್ ಆಗುತ್ತಿರುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!