ಬೆಳಗಾವಿ: ಮೊದಲೇ ರಾಜ್ಯ ರಾಜಕಾರಣದಲ್ಲಿ ಖುರ್ಚಿಯ ಕದನ ಜೋರಾಗಿದೆ. ಸಿಎಂ ಆಗಲೇಬೇಕೆಂದು ಡಿಕೆ ಶಿವಕುಮಾರ್ ಪಣ ತೊಟ್ಟಿದ್ದಾರೆ. ಆ ಕಾರಣಕ್ಕಾಗಿಯೇ ಹಲವು ಸಾಹಸಗಳನ್ನು ಮಾಡ್ತಾ ಇದ್ದಾರೆ. ಅಧಿಕಾರದ ಬೆಳವಣಿಗೆಯ ನಡುವೆಯೇ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಒಂದನ್ನ ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಅವತ್ತಿನ ಕುಮಾರಸ್ವಾಮಿ ಸಮ್ಮಿಶ್ರ ಬೀಳುವುದಕ್ಕೆ ಮೂಲ ಕಾರಣ ಡಿಕೆ ಶಿವಕುಮಾರ್. ಪ್ರತಿಯೊಬ್ಬ ಸಣ್ಣ ಹುಡುಗರಿಗೂ ಗೊತ್ತಿದೆ. ಇದ್ರಲ್ಲಿ ಪಾಪ ಸಿದ್ದರಾಮಯ್ಯ ಅವರಲ್ಲ. ಯಾಕಂದ್ರೆ ಆ ಸರ್ಕಾರ ತೆಗೆದಾಗ ಬಹಳ ಮುಖ್ಯ ವ್ಯಕ್ತಿ ನಾನೇ ಇದ್ದೆ. ಮಿತ್ರಮಂಡಳಿ ಇತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಅದಕ್ಕೂ ಸಂಬಂಧವಿಲ್ಲ. ದೇವೇಗೌಡ ಅವರು ಯಾವ ರೀತಿ ಹೇಳ್ತಾ ಇದ್ದಾರೆ ಎಂಬುದು ಗೊತ್ತಿಲ್ಲ. ಡಿಕೆ ಅವರಿಂದ ಸರ್ಕಾರ ಬಿತ್ತು ಎಂದಿದ್ದಾರೆ.
ಹಾಗಾದ್ರೆ ಈಗಲೂ ಡಿಕೆ ಶಿವಕುಮಾರ್ ಅವರಿಂದ ಕಾಂಗ್ರೆಸ್ ಪಥನವಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ನಾಯಕ. ಅದಕ್ಕೆ ಬದ್ಧವಾಗಿದ್ದೇನೆ. ಆದರೆ ನಾವೂ ಕಾಯೋಣಾ. ಅವರು ಬಡಿದಾಡಲಿ ಏನಾದರೂ ಮಾಡಿಕೊಳ್ಳಲಿ ಅದಕ್ಕೆ ಹೋಗಬಾರದು. ಚುನಾವಣೆಗೆ ಹೋಗುವುದು ಒಳ್ಳೆಯದು ಎಂದಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಬಾಂಬೆ ಬಾಯ್ಸ್ ಅಂತಾನೇ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರು ಫೇಮಸ್ ಆಗಿದ್ದರು. ಅಂದು ಬಿದ್ದ ಸಮ್ಮಿಶ್ರ ಸರ್ಕಾರಕ್ಕೆ ಹಲವು ಊಹಾಪೋಹಗಳು ಹರಿದಾಡಿದ್ದವು. ಈಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಹಂಬಲದಲ್ಲಿದ್ದರೆ ಅಂದಿನ ಸರ್ಕಾರ ಬೀಳೋದಕ್ಕೆ ಅವರೇ ಕಾರಣ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















