ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಲಬುರಗಿ: ಲೋಕಸಭಾ ಚುನಾವಣಾ ಹಿನ್ನೆಲೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಅದರಲ್ಲೂ ಇಂದಿನಿಂದ ಪ್ರಧಾನಿ ಮೋದಿಯವರೇ ರಾಜ್ಯಕ್ಕೆ ಆಗಮಿಸಿ, ಪ್ರಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಇಂದು ಕಲಬುರಗಿಗೆ ಭೇಟಿ ನೀಡಿದ್ದು, ನಂತರದ ದಿನಗಳಲ್ಲಿ ಶಿವಮೊಗ್ಗಕ್ಕೂ ಭೇಟಿ ನೀಡಲಿದ್ದಾರೆ. ಟಿಕೆಟ್ ಕೈತಪ್ಪಿದ ಪರಿಣಾಮ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಅದರಲ್ಲೂ ಕೆ ಎಸ್ ಈಶ್ವರಪ್ಪ ಬಂಡಾಯದ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ಬಿವೈ ವಿಜಯೇಂದ್ರ ಅವರು ಮಾತನಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿದ್ದಾಗ 26 ಕ್ಷೇತ್ರಗಳನ್ನು ಗೆದ್ದಿದ್ದೆವು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲಬೇಕು ಈ ಗೆಲುವಿನ ಸವಾಲು ನಮಗಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಆಡಳಿತದಿಂದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ನವರು ಜಾತಿ ಜಾತಿ ಎತ್ತಿಕಟ್ಟುವ ಹುನ್ನಾರದಿಂದ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಜನ ಇದಕ್ಕೆಲ್ಲ ತಕ್ಕ ಉತ್ತರ ನೀಡಲಿದ್ದು, ನಾವೂ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಲಿದ್ದೇವೆ. ಬೆಳಗಾವಿ ವಿಚಾರದಲ್ಲಿ ಇನ್ನೂ ಅಂತಿಮವಾಗಿಲ್ಲ. ಕೇಂದ್ರದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎರಡು ಮೂರು ದಿನದಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಹೈಕಮಾಂಡ್ ತಿಳಿಸಲಿದೆ.
ಇದೆ ವೇಳೆ ಈಶ್ವರಪ್ಪ ಅವರ ಬಗ್ಗೆ ಮಾತನಾಡಿ, ಕೆ ಎಸ್ ಈಶ್ವರಪ್ಪ ಅವರು ಪಕ್ಷದ ಹಿರಿಯರು. ಪಕ್ಷದ ಸಂಘಟನೆಯಲ್ಲಿ ತಮ್ಮದೇ ಕೊಡುಗೆ ನೀಡಿದವರು. ನಮ್ಮ ಪಕ್ಷದ ಹಿರಿಯ ಮುಖಂಡರು ಈಶ್ವರಪ್ಪ ಅವರ ಜೊತೆಗೆ ಸಂಪರ್ಕದಲ್ಲಿದ್ದಾರೆ. ಬಸವರಾಜ್ ಬೊಮ್ಮಾಯಿ ಅವರನ್ನು ಹಾವೇರಿಗೆ ಘೋಷಿಸಿದ್ದು ವಿಜಯೇಂದ್ರ ಅಲ್ಲ. ನಮ್ಮ ಕೇಂದ್ರದ ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನ ಮಾಡಿದೆ. ನನಗೆ ನಂಬಿಕೆ ಇದೆ. ನಮ್ಮ ವರಿಷ್ಠರು ಈಶ್ವರಪ್ಪ ಅವರ ಮನವೊಲಿಸುತ್ತಾರೆ ಎಂದಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್