Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿದ್ದು ವಿಜಯೇಂದ್ರ ಅಲ್ಲ : ಈಶ್ವರಪ್ಪ ಅವರಿಗೆ ತಿಳಿಸಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ

Facebook
Twitter
Telegram
WhatsApp

ಕಲಬುರಗಿ: ಲೋಕಸಭಾ ಚುನಾವಣಾ ಹಿನ್ನೆಲೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಅದರಲ್ಲೂ ಇಂದಿನಿಂದ ಪ್ರಧಾನಿ ಮೋದಿಯವರೇ ರಾಜ್ಯಕ್ಕೆ ಆಗಮಿಸಿ, ಪ್ರಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಇಂದು ಕಲಬುರಗಿಗೆ ಭೇಟಿ ನೀಡಿದ್ದು, ನಂತರದ ದಿನಗಳಲ್ಲಿ ಶಿವಮೊಗ್ಗಕ್ಕೂ ಭೇಟಿ ನೀಡಲಿದ್ದಾರೆ. ಟಿಕೆಟ್ ಕೈತಪ್ಪಿದ ಪರಿಣಾಮ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಅದರಲ್ಲೂ ಕೆ ಎಸ್ ಈಶ್ವರಪ್ಪ ಬಂಡಾಯದ ಮಾತುಗಳನ್ನಾಡಿದ್ದಾರೆ.

ಈ ಬಗ್ಗೆ ಕಲಬುರಗಿಯಲ್ಲಿ ಬಿವೈ ವಿಜಯೇಂದ್ರ ಅವರು ಮಾತನಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿದ್ದಾಗ 26 ಕ್ಷೇತ್ರಗಳನ್ನು ಗೆದ್ದಿದ್ದೆವು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲಬೇಕು ಈ ಗೆಲುವಿನ ಸವಾಲು ನಮಗಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಆಡಳಿತದಿಂದ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ನವರು ಜಾತಿ ಜಾತಿ ಎತ್ತಿಕಟ್ಟುವ ಹುನ್ನಾರದಿಂದ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಜನ ಇದಕ್ಕೆಲ್ಲ ತಕ್ಕ ಉತ್ತರ ನೀಡಲಿದ್ದು, ನಾವೂ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲಲಿದ್ದೇವೆ. ಬೆಳಗಾವಿ ವಿಚಾರದಲ್ಲಿ ಇನ್ನೂ ಅಂತಿಮವಾಗಿಲ್ಲ. ಕೇಂದ್ರದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎರಡು ಮೂರು ದಿನದಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಹೈಕಮಾಂಡ್ ತಿಳಿಸಲಿದೆ.

ಇದೆ ವೇಳೆ ಈಶ್ವರಪ್ಪ ಅವರ ಬಗ್ಗೆ ಮಾತನಾಡಿ, ಕೆ ಎಸ್ ಈಶ್ವರಪ್ಪ ಅವರು ಪಕ್ಷದ ಹಿರಿಯರು. ಪಕ್ಷದ ಸಂಘಟನೆಯಲ್ಲಿ ತಮ್ಮದೇ ಕೊಡುಗೆ ನೀಡಿದವರು. ನಮ್ಮ ಪಕ್ಷದ ಹಿರಿಯ ಮುಖಂಡರು ಈಶ್ವರಪ್ಪ ಅವರ ಜೊತೆಗೆ ಸಂಪರ್ಕದಲ್ಲಿದ್ದಾರೆ. ಬಸವರಾಜ್ ಬೊಮ್ಮಾಯಿ ಅವರನ್ನು ಹಾವೇರಿಗೆ ಘೋಷಿಸಿದ್ದು ವಿಜಯೇಂದ್ರ ಅಲ್ಲ. ನಮ್ಮ ಕೇಂದ್ರದ ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನ ಮಾಡಿದೆ‌. ನನಗೆ ನಂಬಿಕೆ ಇದೆ. ನಮ್ಮ ವರಿಷ್ಠರು ಈಶ್ವರಪ್ಪ ಅವರ ಮನವೊಲಿಸುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!