ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಿರೇಗುಂಟನೂರು, ಭೀಮಸಮುದ್ರ, ಕುರುಬರಹಳ್ಳಿ, ವಿ.ಪಾಳ್ಯ, ಕೊಡಗವಲ್ಲಿ, ಬೊಮ್ಮನಹಳ್ಳಿ ಪ್ರತಿಯೊಂದು ವಲಯ ಮಟ್ಟದಲ್ಲಿ ನಾಲ್ಕರಿಂದ ಐದು ಸಾಮಾನ್ಯ ಸೇವಾ ಕೇಂದ್ರ ತೆರೆಯಲಾಯಿತು.
ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಎ.ಜೆ. ಹಿರೇಗುಂಟನೂರಿನಲ್ಲಿ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡುತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳು ಜನ ಸಾಮಾನ್ಯರಿಗೆ ಒಂದೆ ಕಡೆ ಸಿಗುವಂತಾಗಲಿ ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ಸುಮಾರು ಹತ್ತು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳು ಪ್ರಾರಂಭವಾಗಿವೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಸಮಯ ಹಾಗೂ ಹಣ ಉಳಿತಾಯವಾಗಲಿದೆ ಎಂದು ಹೇಳಿದರು.
ಮೇಲ್ವಿಚಾರಕ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಸುದಮ್ಮ, ಒಕ್ಕೂಟದ ಅಧ್ಯಕ್ಷೆ ಸುನಿತ, ಸೇವಾ ಪ್ರತಿನಿಧಿಗಳಾದ ಮಂಜುಳ, ಮಹಾಲಿಂಗಮ್ಮ, ಗ್ರಾಮದ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…
ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…