Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಅವರ ಫೋಟೋ ಕೇಳಿದ್ದಕ್ಕೆ ದೆಹಲಿಯಲ್ಲಿ ಸಿದ್ದರಾಮಯ್ಯ ಅವರ ಫೋಟೋ ಕೊಟ್ಟರಂತೆ : ನಳಿನ್ ಹೇಳಿದ ಕಥೆ ಇಲ್ಲಿದೆ

Facebook
Twitter
Telegram
WhatsApp

 

ಗದಗ: ಬಿಜೆಪಿ ಜನಸ್ಪಂದನಾ ಯಾತ್ರೆಯಲ್ಲಿ ಬ್ಯುಸಿಯಾಗಿದೆ. ನಾಯಕರೆಲ್ಲಾ ಒಂದೊಂದು ಜಿಲ್ಲೆಗೆ ಭೇಟಿ ನೀಡಿ ಜನಸ್ಪಂದನಾ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ನಿನ್ನೆ ಗದಗ ಜಿಲ್ಲೆಯಲ್ಲಿ ಜನಸ್ಪಂದನಾ ಯಾತ್ರೆ ನಡೆದಿದೆ. ಈ ವೇಳೆ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವಾಗಿ ಕಿಡಿಕಾರಿದ್ದಾರೆ. ಫೋಟೋ ಒಂದರ ಕಥೆ ಹೇಳಿ ವ್ಯಂಗ್ಯವಾಡಿದ್ದಾರೆ.

ವೇದಿಕೆಯಲ್ಲಿ ಮಾತನಾಡುತ್ತಾ, ದೆಹಲಿಯಲ್ಲಿರುವ ನನ್ನ ಮನೆಯಲ್ಲಿ ಎಲ್ಲಾ ನಾಯಕರ ಫೋಟೋ ಇದೆ. ಬೊಮ್ಮಾಯಿ ಅವರ ಫೋಟೋ ಮಾತ್ರ ಇರಲಿಲ್ಲ. ಹೀಗಾಗಿ ಉದಾಸಿ ಅವರನ್ನು ಕರೆದುಕೊಂಡು ದೆಹಲಿ ಮಾರ್ಕೆಟ್ ಗೆ ಹೋದೆವು. ಅಲ್ಲಿ ಎರಡು ಅಂಗಡಿಯಲ್ಲಿ ಕೇಳಿದೆವು ಇಲ್ಲ ಅಂದರು. ಮೂರನೇ ಅಂಗಡಿಯಲ್ಲಿ ಬೊಮ್ಮಾಯಿ ಫೋಟೋ ಬದಲಿಗೆ ಸಿದ್ದರಾಮಯ್ಯ ಫೋಟೋ ಕೊಟ್ಟರು.

ಉದಾಸಿಗೆ ಕೋಪ ಹೆಚ್ಚಾಗಿತ್ತು. ನಾವೂ ಕೇಳಿದ್ದು ಸಿಎಂ ಬೊಮ್ಮಾಯಿ ಅವರ ಫೋಟೋ. ಸಿದ್ದರಾಮಯ್ಯ ಅವರದ್ದಲ್ಲ ಎಂದರು. ಅದಕ್ಕೆ ಅಂಗಡಿಯವನು ಹೇಳಿದ ಬೊಮ್ಮಾಯಿ ಅವರ ಫೋಟೋ ಬಂದರೆ ಐದೇ ನಿಮಿಷಕ್ಕೆ ಖಾಲಿಯಾಗುತ್ತೆ. ಸಿದ್ದರಾಮಯ್ಯ ಅವರ ಫೋಟೋವನ್ನು ಯಾರು ತೆಗೆದುಕೊಳ್ಳುವುದಿಲ್ಲ ಎಂದಿದ್ದ. ಸಿದ್ದರಾಮಯ್ಯ ಯಾರಿಗೂ ಬೇಡದವನಾಗಿದ್ದಾನೆ ಎಂದು ಕಟೀಲು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!