Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೀವಂತ ಬಾಂಬ್ ಸಿಕ್ಕಿದೆಯಂತೆ : ಕಾಂಗ್ರೆಸ್ ಸರ್ಕಾರದ ಮೇಲೆ ಪ್ರಮೋದ್ ಮುತಾಲಿಕ್ ಕೆಂಡಾಮಂಡಲ

---Advertisement---

 

ಧಾರವಾಡ: ಸಿಸಿಬಿ ಪೊಲೀಸರು ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ದೊಡ್ಡ ಸ್ಕೆಚ್ ಅನ್ನೇ ಈ ಉಗ್ರರು ಹಾಕಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಯೋತ್ಪಾದಕರಂತ ಕೆಟ್ಟ ಹುಳಗಳು ಹೊರಗೆ ಬರುತ್ತಿವೆ ಎಂದು ಕಿಡಿಕಾರಿದ್ದಾರೆ.

ಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಾನು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಅವರ ಬಳಿ ಜೀವಂತ ಬಾಂಬ್ ಸಿಕ್ಕಿದೆಯಂತೆ. ಸುಲ್ತಾನ ಪಾಳ್ಯದಲ್ಲಿ ಇವರು ವಾಸವಾಗಿದ್ದರು ಎನ್ನಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಗಳು ಬಂದ ಮೇಲೆ ಇಂತ ಹುಳಗಳೆಲ್ಲಾ ಹೊರಗೆ ಬರುತ್ತಿವೆ.

ಇವರಿಗೆಲ್ಲಾ ಕಾಂಗ್ರೆಸ್ ಸರ್ಕಾರದಿಂದ ಫೋಷಣೆಯಾಗುತ್ತಿದೆ. ಈ ಮೂಲಕ ಲಕ್ಷಾಂತರ ಜನರನ್ನು ಕೊಂದು ಹಾಕಿದ್ದಾರೆ. ಈಗ ಕಾಂಗ್ರೆಸ್ ಬಂದಿದ್ದರಿಂದ ಇಂತಹವುಗಳು ಇನ್ನೂ ಹೆಚ್ಚಾಗಿದೆ. ಬಿಜೆಪಿ ಇದ್ದಾಗ ಹರ್ಷನ ಕೊಲೆಯಾಯ್ತು. ಜೈಲಿನಲ್ಲಿದ್ದ ಆರೋಪಿಗಳು ಫೋನಿನಲ್ಲಿ‌ಮಾತಾಡುತ್ತಿದ್ದರಂತೆ. ಇವತ್ತುಬಸಿಕ್ಕ ಆರೋಪಿಗಳು ಕೂಡ ಅವರ ಸಂಪರ್ಕದಲ್ಲಿದ್ದರು ಎನ್ನಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...