Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವರಾಜ್ ಇಂಡಿಯಾ ಜಿಲ್ಲಾಧ್ಯಕ್ಷರಾಗಿ ಜೆ.ಯಾದವ ರೆಡ್ಡಿ ಮರು ಆಯ್ಕೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ : ಸ್ವರಾಜ್ ಇಂಡಿಯಾದ ಜಿಲ್ಲಾ ಅಧ್ಯಕ್ಷರಾಗಿ ಜೆ.ಯಾದವರೆಡ್ಡಿ ಅವರು ಮರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಗರದ ರೈತ ಭವನದಲ್ಲಿ ನಡೆದ ಸಭೆಯಲ್ಲಿ
ಸ್ವರಾಜ್ ಇಂಡಿಯಾದ ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ ರಾಷ್ಟ್ರೀಯ ಸಮಿತಿ ಸದಸ್ಯ ಅಮ್ಮದ್ ಬಾಷಾ ಹಾಗೂ ರಾಜ್ಯ ಸಮಿತಿ ಉಪಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಅವರು ಜೆ.ಯಾದವ ರೆಡ್ಡಿ ಅವರನ್ನೊಳಗೊಂಡ ಜಿಲ್ಲಾ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಸಮಿತಿಯನ್ನು ರಚಿಸಿದರು.

ಜಿಲ್ಲಾ ಸಮಿತಿಯ ಸದಸ್ಯರ ವಿವರ ಈ ಕೆಳಗಿನಂತಿದೆ.

ಅಧ್ಯಕ್ಷರು – ಜೆ.ಯಾದವ ರೆಡ್ಡಿ
ಕಾರ್ಯಾಧ್ಯಕ್ಷ – ಬಿ.ಆರ್‌. ಶಿವಕುಮಾರ್‌
ಉಪಾಧ್ಯಕ್ಷರು – ಸೈಯದ್ ಇಸಾಕ್,
ಎನ್.ಆರ್. ಮಹಂತರೆಡ್ಡಿ, ಕೆ.ಸಿ. ಹೊರಕೇರಪ್ಪ,

ಪ್ರಧಾನ ಕಾರ್ಯದರ್ಶಿ – ಎಂ.ಆರ್.ದಾಸೇಗೌಡ
ಸಂಘಟನಾ ಕಾರ್ಯದರ್ಶಿ –  ಹೊಳೆಯಪ್ಪ.ಕೆ ಮತ್ತು ಹಿರೇಹಳ್ಳಿ ಮಂಜಣ್ಣ

ಮಹಿಳಾ ಸಂಚಾಲಕರು –  ತಿಮ್ಮಕ್ಕ ಮತ್ತು ನೇತ್ರಾ  ಸೂರ್ಯ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಇಂದಿನ ಪರಿಸ್ಥಿತಿಯಲ್ಲಿ ಪರ್ಯಾಯ ರಾಜಕಾರಣ ಕಷ್ಟವಾದರೂ ಈ ಕಾಲಮಾನದ ತುರ್ತು ಅಗತ್ಯವೆಂದು ಅಹ್ಮದ್ ಭಾಷಾ ಹೇಳಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕೇವಲ 8 ತಿಂಗಳಲ್ಲಿ ಅಂದಿನ ಸಂದರ್ಭಕ್ಕೆ ಜೆ.ಪಿ.ನೇತೃತ್ವದಲ್ಲಿ ರಾಷ್ಟ್ರೀಯ ಪರ್ಯಾಯ ರಾಜಕಾರಣ ಸಾಧ್ಯವಾಯಿತು ಎಂದು ಜೆ.ಎಂ‌.ವೀರ ಸಂಗಯ್ಯ ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ, ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್ ಬಾಬು, ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಉಪಾಧ್ಯಕ್ಷರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಚಿತ್ರದುರ್ಗ ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಗೌ.ಅಧ್ಯಕ್ಷ, ಮುದ್ದಾಪುರ ನಾಗರಾಜ್, ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಯಾದವ್, ಕಾರ್ಯದರ್ಶಿ ಕೋಗುಂಡೆ ರವಿ,  ಹಿರಿಯೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯಾಧ್ಯಕ್ಷ ದಸ್ತಗೀರ್‌ಸಾಬ್‌, ಚಳ್ಳಕೆರೆ ತಾಲ್ಲೂಕು ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!