Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

---Advertisement---

 

ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ,‌ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಬುದ್ದ ಹಾಗೂ ಜೈನ ಧರ್ಮಗಳು ತಮ್ಮ ವಿಶಿಷ್ಟ ತತ್ವಗಳಿಂದಾಗಿ ಭಾರತ ಹಾಗೂ ಬೇರೆ ದೇಶಗಳಲ್ಲಿಯೂ ಮನ್ನಣೆ ಗಳಿಸಿದ್ದವು. ಬುದ್ಧ ಧರ್ಮ ಏಷ್ಯಾದ ಹಲವು ದೇಶಗಳಿಗೂ ಹಬ್ಬಿತ್ತು. ಇದರ ಜೊತೆಗೆ ಸನಾತನ ಧರ್ಮದಲ್ಲಿ ಶೈವ, ವೈಷ್ಣವ, ಶಕ್ತಿ, ಗಣೇಶ ‌ಹಾಗೂ ಸೂರ್ಯನ ಆರಾಧಕ ಪಂಥಗಳು ಇದ್ದವು. ಇವುಗಳ ಭಿನ್ನತೆಯಿಂದಾಗಿ ಸನಾತನ ಧರ್ಮ ಮಂಕಾಗಿತ್ತು. ಶಂಕರಾಚಾರ್ಯರು ಈ ಎಲ್ಲಾ ಪಂಥಗಳನ್ನು ಒಗ್ಗೂಡಿಸಿ ಸನಾತನ ಧರ್ಮಕ್ಕೆ ಪುನಶ್ಚೇತನ ನೀಡಿದರು. ಅದ್ವೈತ ಸಿದ್ದಾಂತ ಪ್ರತಿಪಾದಿಸಿದರು ಎಂದು ಉಪವಿಭಾಗಧಿಕಾರಿ ಎಂ.ಕಾರ್ತಿಕ್ ಹೇಳಿದರು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ ಮಾತನಾಡಿ, ಶಂಕರಾಚಾರ್ಯರು 1300 ವರ್ಷಗಳ ಹಿಂದೆ ಜನಿಸಿದರು. ಐದನೇ ವರ್ಷಕ್ಕೆ ಉಪನಯನ ನಂತರ ಸನ್ಯಾಸ ಸ್ವೀಕರಿಸಿ, ಅಖಂಡ ಭಾರತವನ್ನು 3 ಬಾರಿ ಪ್ರದಕ್ಷಣೆ ಹಾಕಿ ಹಿಂದೂ ಧರ್ಮದ ಪುನರುಜ್ಜೀವನಗೊಳಿಸಿದರು. ಈ ಕಾರಣದಿಂದಲೇ ಇಂದಿಗೂ ಭಾರತದಲ್ಲಿ ಸನಾತನ ಹಿಂದೂ ಧರ್ಮದ ಉಳಿದುಕೊಂಡು ಬಂದಿದೆ. ಶಂಕರಾಚಾರ್ಯರು ಜ್ಞಾನಕ್ಕೆ ಹೆಚ್ಚಿನ ಒತ್ತುಕೊಟ್ಟು ನಹಿಃ ಜ್ಞಾನೇನ ಸದೃಶಂ ಎಂದು ಹೇಳಿದರು. ಅಹಂ ಬ್ರಹ್ಮಾಸ್ಮೀ ಎಂಬ ತತ್ವದ ಮೂಲಕ ನಮ್ಮಲ್ಲೇ ನಾವು ದೈವತ್ವನ್ನು ಕಾಣಬೇಕು ಎಂದು ತಿಳಿಸಿದರು. ಇದರೊಂದಿಗೆ ಹಲವು ಗ್ರಂಥಗಳ ಮೇಲೆ ಭಾಷ್ಯಗಳನ್ನು ರಚಿಸಿದರು. ಅವರ ರಚಿಸಿದ ಸ್ತುತಿಗಳು ಇಂದಿಗೂ ಜನಮಾನಸದಲ್ಲಿವೆ ಎಂದರು.

ತಹಶಿಲ್ದಾರ ಡಾ.ನಾಗವೇಣಿ ಮಾತನಾಡಿ ಅದ್ವೈತ ಸಿದ್ದಾಂತ ಜೊತೆಗೆ ದೇಶದ ನಾಲ್ಕು ಮೂಲೆಗಳಲ್ಲಿಯೂ ನಾಲ್ಕು ಮಠಗಳನ್ನು ಸ್ಥಾಪಿಸಿ ಹಿಂದೂ ಧರ್ಮವನ್ನು ಪುನಶ್ಚೇತನಗೊಳಿಸಿದರು ಎಂದರು.

ಕಾರ್ಯಕ್ರಮದಲ್ಲಿ ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಬ್ರಾಹ್ಮಣ ಸಂಘದ ಅಧ್ಯಕ್ಷ ನಿರ್ದೇಶಕ ಶಂಕರ್,ಮುಖಂಡರುಗಳಾದ ಮಂಜುನಾಥ, ಹರೀಶ್, ಭಾರತಿ ಸೇರಿದಂತೆ ಮತ್ತಿತರರು ಇದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿ ಕೆ.ಪಿ.ಎಂ.ಗುರುದೇವ್ ಭಕ್ತಿಗೀತೆ ಪ್ರಸ್ತುತ ಪಡಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment