ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೂ ಟಫ್ ಕಾಂಪಿಟೇಷನ್ ಇದೆ. ಹೀಗಾಗಿ ಈ ಬಾರಿಯ ಗೆಲುವಿಗಾಗಿ ಬಿಜೆಪಿ ಹೈಕಮಾಂಡ್ ಅಳೆದು ತೂಕಿ ಟಿಕೆಟ್ ನೀಡುವತ್ತ ಚಿತ್ತ ಹರಿಸಿದೆ. ಗೆಲ್ಲುವ ಕುದುರೆಗಳಿಗಷ್ಟೇ ಮಣೆ ಹಾಕಲು ಹೊರಟಿದ್ದಾರೆ. ಹಳಬರಿಗೆ ಟಿಕೆಟ್ ನಿರಾಕರಿಸಲು ಹೊರಟಿದ್ದಾರೆ.
ಆದ್ರೆ ಹೈಕಮಾಂಡ್ ನ ಈ ನಿರ್ಧಾರ ಕೆಲ ಹಿರಿಯ ನಾಯಕರಿಗೆ ಬೇಸರ ತರಿಸಿದೆ. ಈಗಾಗಲೇ ಕೆಎಸ್ ಈಶ್ವರಪ್ಪ ಅವರು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈಕಮಾಂಡ್ ನಿರ್ಧಾರಕ್ಕೆ ಬೇಸರ ಮಾಡಿಕೊಂಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರಿಂದ ನನಗೂ ಫೋನ್ ಬಂದಿತ್ತು. ಈ ಬಾರಿ ಬೇರೆಯವರಿಗೆ ಅವಕಾಶ ನೀಡುವಂತೆ ಕೇಳಿದ್ದಾರೆ. ನಾನು ಒಂದು ಪ್ರಶ್ನೆ ಕೇಳಿದ್ದೀನಿ. ಪ್ರತಿ ಸಾರಿ 25 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದೇನೆ. ಸರ್ವೇ ಮಾಡಿದಾಗಲೂ ನನ್ನ ಪರವೇ ಅಭಿಪ್ರಾಯ ಬಂದಿದೆ. ನನ್ನ ರಾಜಕೀಯದಲ್ಲಿ ಕಪ್ಪು ಚುಕ್ಕೆಗಳಿಲ್ಲ, ಭ್ರಷ್ಟಾಚಾರ ಆರೋಪಗಳಿಲ್ಲ. ಹೈಕಮಾಂಡ್ ಮಾತಿನಿಂದ ನನಗೆ ಬೇಸರವಾಗಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್