ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿಯಿಂದ ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ನೀಡದೆ ಇದ್ದ ಕಾರಣ, ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ತನ್ನ ಊರಿಗೆ ತೆರಳಿದ್ದರು. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಕ್ಷೇತ್ರದ ಬೆಂಬಲಿಗರು, ಅಭಿಮಾನಿಗಳೆಲ್ಲಾ ಸೇರಿ ಬೃಹತ್ ಕಾರ್ಯಕ್ರಮ ಮಾಡಿ, ಜಗದೀಶ್ ಶೆಟ್ಟರ್ ಅವರನ್ನು ಬರಮಾಡಿಕೊಂಡರು.
ಇದೆ ವೇಳೆ ಅವರ ಪತ್ನಿ ಶಿಲ್ಪಾ ಶೆಟ್ಟರ್ ಅವರು ಸಿಕ್ಕಾಪಟ್ಟೆ ಭಾವುಕರಾಗಿದ್ದರು. ಜಗದೀಶ್ ಶೆಟ್ಟರ್ ಅವರ ಹೆಗಲ ಮೇಲೆ ತಲೆ ಇಟ್ಟು, ಗಳಗಳನೇ ಅತ್ತರು. ಕಣ್ಣೀರು ಹಾಕುತ್ತಾ ಟಿಕೆಟ್ ನೀಡದ್ದಕ್ಕೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಇದೆ ವೇಳೆ ಜಗದೀಶ್ ಶೆಟ್ಟರ್ ತಮ್ಮ ಪತ್ನಿಗೆ ಸಮಾಧಾನ ಮಾಡಿದರು.





GIPHY App Key not set. Please check settings