ಮಡೆನೂರು ಮನು ಈಗಷ್ಟೇ ಒಂದು ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದೇ ಒಂದು ಸಿನಿಮಾಗೇನೆ ಅಹಂಕಾರದ ಮಾತುಗಳನ್ನ ಆಡುವುದಕ್ಕೆ ಶುರು ಮಾಡಿದ್ದಾರೆ. ಅತ್ಯಾ*ರ ಕೇಸಲ್ಲಿ ಜೈಲು ಸೇರಿರುವ ಮಡೆನೂರು ಮನು, ಆಡಿದ ಒಂದೊಂದು ಆಡಿಯೋಗಳು ಸಹ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದಾವೆ. ಅದರಲ್ಲೂ ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಆಡಿದ ಮಾತುಗಳು ಕನ್ನಡಿಗರನ್ನ ಕೆಂಡಾಮಂಡಲವಾಗಿಸಿದೆ.
ಮಡೆನೂರು ಮನು ಆಡಿದ ಮಾತುಗಳು ಎನ್ನಲಾದ ಶಿವಣ್ಣರ ಸಾವು, ದರ್ಶನ್, ಧ್ರುವ ಸರ್ಜಾ ಮೀರಿಸುವ ಮಾತುಗಳಿಗೆ ಫಿಲ್ಮ್ ಚೇಂಬರ್ ಕೂಡ ವಿರೋಧ ವ್ಯಕ್ತಪಡಿಸಿದೆ. ಎಲ್ಲೆಡೆ ಆತನನ್ನು ಬ್ಯಾನ್ ಮಾಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಇನ್ನ್ಯಾವುದೇ ಶೋನಲ್ಲೂ ಆತ ಕಾಣಿಸಿಕೊಳ್ಳಬಾರದು ಅಂತಾನೇ ಆಗ್ರಹಗಳು ಕೇಳಿ ಬರುತ್ತಿವೆ. ಇದೀಗ ಈ ಸಂಬಂಧ ನವರಸ ನಾಯಕ ಜಗ್ಗೇಶ್ ಅವರು ಕೂಡ ಟ್ವೀಟ್ ಮಾಡಿದ್ದಾರೆ.
ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ, ಗುರು ಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸವೇ ಇಲ್ಲ. ಇಂದು ಇದ್ದದ್ದು ನಾಳೆ ಇರದು. ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕನಸುಗಳೇ. ಆಯುಷ್ಯ ಬರೆಯೋದು ಬ್ರಹ್ಮ, ಚಿಲ್ಲರೆ ಮನುಷ್ಯರಲ್ಲ. ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು. ಶಿವರಾಜ್ಕುಮಾರ್ ಚಿತ್ರರಂಗದ ಕಿರೀಟವಿದ್ದಂತೆ. ಎಲ್ಲರನ್ನು ಪ್ರೀತಿಸುವ ಜೀವ. ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ. ನೀವೂ ಹಿಮಾಲಯ. ನಿಮಗೆ ದೀರ್ಘಾಯುಷ್ಯ ಪ್ರಾಪ್ತಿ. ನಿಮ್ಮನ್ನ ಹೆತ್ತವರು, ಕನ್ನಡಿಗರ ಆಶೀರ್ವಾದವಿದೆ ಎಂದು ಹೇಳಿದ್ದಾರೆ.









