in ,

ದಾವಣಗೆರೆ ಚಿತ್ರಮಂದಿರದಲ್ಲಿ ಜಗ್ಗೇಶ್ ಸಿನಿಮಾ ನಿಲ್ಲಿಸಲು ಹೇಳಿ, ಪೋಸ್ಟರ್ ಮುಚ್ಚಿದ್ದೇಕೆ..?

suddione whatsapp group join

 

 

ದಾವಣಗೆರೆ: ರಾಜ್ಯದಲ್ಲಿ ಚುನಾವಣಾ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಸ್ಟಾರ್ ಪ್ರಚಾರಕರೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಕೂಡ ಬಿಜೆಪಿಯಲ್ಲಿ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಈ ಮಧ್ಯೆ ಅವರ ನಟನೆಯ ರಾಘವೇಂದ್ರ ಸ್ಟೋರ್ ಸಿನಿಮಾ ಕೂಡ ರಿಲೀಸ್ ಆಗಿದೆ. ಅದ್ಭುತ ರೆಸ್ಪಾನ್ಸ್ ಪಡೆಯುತ್ತಿದೆ.

ಜಗ್ಗೇಶ್ ಅವರು ರಾಜ್ಯಸಭಾ ಸದಸ್ಯರು ಕೂಡ. ಸ್ಟಾರ್ ಪ್ರಚಾರಕರು ಕೂಡ ಆಗಿರುವ ಕಾರಣ ಅವರ ಸಿನಿಮಾದ ಮೇಲೆ ಚುನಾವಣಾ ಆಯೋಗ ಕಣ್ಣಿಟ್ಟಿದೆ. ದಾವಣಗೆರೆಯಲ್ಲಿರುವ ಗೀತಾಂಜಲಿ ಚಿತ್ರಮಂದಿರಕ್ಕೆ ಚುನಾವಣಾ ಆಯೋಗ ಭೇಟಿ ನೀಡಿ, ಸಿನಿಮಾ ನಿಲ್ಲಿಸುವಂತೆ ತಿಳಿಸಿದೆ. ಸಿನಿಮಾ ಪ್ರದರ್ಶನ‌ ಮಾಡದಂತೆ ಸೂಚಿಸಿದೆ.

ಆದರೆ ಚಿತ್ರಮಂದಿರದ ಮಾಲೀಕರು ಮಾತನಾಡಿದ ಮೇಲೆ ಸಮಸ್ಯೆ ಬಗೆಹರಿದಿದೆ. ಜಗ್ಗೇಶ್ ಅವರು ಸ್ಟಾರ್ ಪ್ರಚಾರಕರು ಅಷ್ಟೇ. ಅವರೇನು ಚುನಾವಣೆಯಲ್ಲಿ ನಿಂತಿಲ್ಲ ಎಂದ ಮೇಲೆ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದೆ. ಆದರೆ ಸಿನಿಮಾ ಪೋಸ್ಟರ್ ಮೇಲೆ ಆಯೋಗದ ಅಧಿಕಾರಿಗಳು ಬಿಳಿ ಹಾಳೆ ಅಂಟಿಸಿದ್ದಾರೆ. ಜಗ್ಗೇಶ್ ಮುಖ ಕಾಣದಂತೆ ಮಾಡಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಗಂಭೀರ್ ಜೊತೆಗಿನ ಗಲಾಟೆ ನಡುವೆಯೇ ಊರು ಸುತ್ತಲು ಹೊರಟ ಕೊಹ್ಲಿ ಹೋಗಿದ್ದೆಲ್ಲಿಗೆ..?

ಮೇ 6ರವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರಿಕೆ