Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಚಿತ್ರಮಂದಿರದಲ್ಲಿ ಜಗ್ಗೇಶ್ ಸಿನಿಮಾ ನಿಲ್ಲಿಸಲು ಹೇಳಿ, ಪೋಸ್ಟರ್ ಮುಚ್ಚಿದ್ದೇಕೆ..?

Facebook
Twitter
Telegram
WhatsApp

 

 

ದಾವಣಗೆರೆ: ರಾಜ್ಯದಲ್ಲಿ ಚುನಾವಣಾ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಸ್ಟಾರ್ ಪ್ರಚಾರಕರೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಕೂಡ ಬಿಜೆಪಿಯಲ್ಲಿ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಈ ಮಧ್ಯೆ ಅವರ ನಟನೆಯ ರಾಘವೇಂದ್ರ ಸ್ಟೋರ್ ಸಿನಿಮಾ ಕೂಡ ರಿಲೀಸ್ ಆಗಿದೆ. ಅದ್ಭುತ ರೆಸ್ಪಾನ್ಸ್ ಪಡೆಯುತ್ತಿದೆ.

ಜಗ್ಗೇಶ್ ಅವರು ರಾಜ್ಯಸಭಾ ಸದಸ್ಯರು ಕೂಡ. ಸ್ಟಾರ್ ಪ್ರಚಾರಕರು ಕೂಡ ಆಗಿರುವ ಕಾರಣ ಅವರ ಸಿನಿಮಾದ ಮೇಲೆ ಚುನಾವಣಾ ಆಯೋಗ ಕಣ್ಣಿಟ್ಟಿದೆ. ದಾವಣಗೆರೆಯಲ್ಲಿರುವ ಗೀತಾಂಜಲಿ ಚಿತ್ರಮಂದಿರಕ್ಕೆ ಚುನಾವಣಾ ಆಯೋಗ ಭೇಟಿ ನೀಡಿ, ಸಿನಿಮಾ ನಿಲ್ಲಿಸುವಂತೆ ತಿಳಿಸಿದೆ. ಸಿನಿಮಾ ಪ್ರದರ್ಶನ‌ ಮಾಡದಂತೆ ಸೂಚಿಸಿದೆ.

ಆದರೆ ಚಿತ್ರಮಂದಿರದ ಮಾಲೀಕರು ಮಾತನಾಡಿದ ಮೇಲೆ ಸಮಸ್ಯೆ ಬಗೆಹರಿದಿದೆ. ಜಗ್ಗೇಶ್ ಅವರು ಸ್ಟಾರ್ ಪ್ರಚಾರಕರು ಅಷ್ಟೇ. ಅವರೇನು ಚುನಾವಣೆಯಲ್ಲಿ ನಿಂತಿಲ್ಲ ಎಂದ ಮೇಲೆ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದೆ. ಆದರೆ ಸಿನಿಮಾ ಪೋಸ್ಟರ್ ಮೇಲೆ ಆಯೋಗದ ಅಧಿಕಾರಿಗಳು ಬಿಳಿ ಹಾಳೆ ಅಂಟಿಸಿದ್ದಾರೆ. ಜಗ್ಗೇಶ್ ಮುಖ ಕಾಣದಂತೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!