ಸಿದ್ದರಾಮಯ್ಯರನ್ನು ಗೆಲ್ಲಿಸಲೇಬೇಕೆಂದು ಕಣಕ್ಕೆ ಇಳಿದ ಜಮೀರ್..!

suddionenews
1 Min Read

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಕೇಳುವುದಕ್ಕೆ ಆರಂಭಿಸಿದೆ. ಸಿದ್ದರಾಮಯ್ಯ ಈ ಬಾರಿ ಕೋಲಾರದಿಂದಾನೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿಯಾಗಿದೆ. ಅದರ ಜೊತೆಗೆ ಪ್ರಚಾರದಲ್ಲೂ ಬ್ಯುಸಿಯಾಗಿದ್ದಾರೆ.

ಕೋಲಾರದಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲೇಬೇಕೆಂದುಕೊಂಡಿರುವ ಬೆಂಬಲಿಗರು ಕೂಡ ಅವರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕೋಲಾರದಲ್ಲಿ ಸಂಚರಿಸಿ ಜಮೀರ್ ಅಹ್ಮದ್ ಖಾನ್, ಕೃಷ್ಣಭೈರೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಹಲವರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದು, ಪ್ರಚಾರ ಕಾರ್ಯ ಶುರು ಮಾಡಿದ್ದಾರೆ.

ಇಂದು ಕೋಲಾರಕ್ಕೆ ಆಗಮಿಸಿರುವ ಜಮೀರ್ ಅಂಡ್ ಟೀಂ, ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಇಂದು ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿ ನೂರಾರು ಜನರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *