Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಲಾ ಹು ಅಕ್ಬರ್ʼ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ಬಹುಮಾನ ಘೋಷಣೆ..!

Facebook
Twitter
Telegram
WhatsApp

ನವದೆಹಲಿ: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಬಹಳ ಜೋರಾಗಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿತ್ತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಅಲ್ಲಾ ಹು ಅಕ್ಬರ್ ಎಂದು ಜೋರಾಗಿ ಕೂಗಿಕೊಂಡು ಹೋದ ವಿಡಿಯೋ. ಆ ವಿದ್ಯಾರ್ಥಿನಿ ಹಿಂದೆಯೇ ಹುಡುಗರ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಹೋಗಿದ್ದರು. ಇದೀಗ ಜಮಾತ್ ಉಲೇಮಾ ಎ ಹಿಂದ್ ಆ ವಿದ್ಯಾರ್ಥಿನಿಗೆ 5 ಲಕ್ಷ ರೂ ಬಹುಮಾನ ಘೋಷಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಮಾತ್ ಉಲೇಮಾ ಎ ಹಿಂದ್, 5 ಲಕ್ಷ ಬಹುಮಾನ ನೀಡೋದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಆ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಕೂಡ ಮಾತನಾಡಿದ್ದು, ನಾನು ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದೆ. ಈ ವೇಳೆ ಅಲ್ಲಿಂದ ಗುಂಪು ಜೈ ಶ್ರೀರಾಮ್ ಎಂದು ಕೂಗಿದರು. ಅದಕ್ಕೆ ನಾನು ಅಲ್ಲಾಹು ಅಕ್ಬರ್ ಎಂದೇ. ಅಲ್ಲಿದ್ದವರಲ್ಲಿ ನಮ್ಮ ಕಾಲೇಜಿನ ಹುಡುಗರು ಇದ್ದದ್ದು 10 ಪರ್ಸೆಂಟ್ ಮಾತ್ರ. ಇನ್ನುಳಿದವರು ಬೇರೆಯವರು ಎಂದಿದ್ದಾರೆ.

ಇನ್ನು ಒಂದು ತುಂಡು ಬಟ್ಟೆ ವಿಚಾರಕ್ಕೆ ಅವರು ನಮ್ಮ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದ್ದಾರೆ. ನಮಗೆ ಶಿಕ್ಷಣವೇ ಮೊದಲ ಆದ್ಯತೆ. ಬುರ್ಖಾ ಮತ್ತು ಹಿಜಬ್ ಧರಿಸಿ ಕಾಲೇಜಿಗೆ ಬರುತ್ತಿದ್ದೆವು. ಆದ್ರೆ ಕಾಲೇಜಿನ ಒಳಗೆ ಬುರ್ಖಾ ತೆಗೆದು ಹಿಜಬ್ ಮಾತ್ರ ಉಳಿಸಿಕೊಳ್ಳುತ್ತಿದ್ದೆವು. ಇದು ಮುಂಚೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಆ ವಿದ್ಯಾರ್ಥಿನಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!