Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಹೆಜ್ಜೆ: ಏಪ್ರಿಲ್ 25 ರಂದು ಸದಸ್ಯತ್ವ ಅಭಿಯಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ನೆರೆಯ ಆಂಧ್ರ ಪ್ರದೇಶದಲ್ಲಿ ತನ್ನದೇ ಆದ ರಾಜಕೀಯ ಪ್ರಭಾವ ಮೂಡಿಸಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾರಥ್ಯದ ‘ಜನಸೇನಾ ಪಕ್ಷ’ ಈಗ ಚಿತ್ರದುರ್ಗದ ಮೂಲಕ ತಳಮಟ್ಟದಿಂದ ಪಕ್ಷ ಸಂಘಟನೆಗೆ ಸಜ್ಜಾಗಿದೆ ಎಂದು ಪಕ್ಷದ ಸದಸ್ಯ ಡಿ.ಬಸವರಾಜ್ (ಬಿ.ಟಿ.ರಾಜ್) ತಿಳಿಸಿದ್ದಾರೆ.

ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಕೋಟೆನಾಡು ಚಿತ್ರದುರ್ಗದ ಮೂಲಕ ಪಕ್ಷವು ರಾಜ್ಯ ಪ್ರವೇಶದ ಅಧಿಕೃತ ಘೋಷಣೆ ಮಾಡುತ್ತಿದ್ದು, ಇದರೊಂದಿಗೆ ಸದಸ್ಯತ್ವ ಅಭಿಯಾನಕ್ಕೂ ಭರ್ಜರಿ ಚಾಲನೆ ನೀಡಲಾಗುತ್ತಿದೆ.

ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್‌ಜಿ ಕನ್ವೆನ್ಶನ್ ಹಾಲ್ ನಲ್ಲಿ ಏಪ್ರಿಲ್ 25 (ಶನಿವಾರ) ರಂದು ಬೆಳಿಗ್ಗೆ 9.30ರಿಂದ ಈ ಮಹತ್ವದ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಆಂಧ್ರ ಪ್ರದೇಶ ವಿಧಾನ ಪರಿಷತ್ ಸದಸ್ಯ ನಾಗಬಾಬು ಹಾಗೂ ಜನಾಸೇನಾ ಪಕ್ಷದ ಆಂಧ್ರ ಪ್ರದೇಶ ಪ್ರಧಾನ ಕಾರ್ಯದರ್ಶಿ ರಾಮ್ ತಲ್ಲೂರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪಕ್ಷದ ಸಂಘಟನೆಗೆ ಬಲ ನೀಡುವ ಪ್ರಮುಖ ಹುದ್ದೆಗಳ ಘೋಷಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಆಯಾಮಗಳನ್ನು ತರುವ ಪ್ರಯತ್ನಕ್ಕೆ ಚಾಲನೆ ಸಿಗಲಿದೆ. ಜೊತೆಗೆ, ಯುವಜನತೆ ಮತ್ತು ಸಾಮಾನ್ಯ ಜನರನ್ನು ಸೆಳೆಯುವ ಉದ್ದೇಶದಿಂದ ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ ಆರಂಭಗೊಳ್ಳಲಿದೆ.

ಜನಸೇನಾ ಪಕ್ಷವು ಸಾಮಾಜಿಕ ನ್ಯಾಯ, ಪಾರದರ್ಶಕತೆ ಹಾಗೂ ಜನಸಾಮಾನ್ಯರ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದು, ಕರ್ನಾಟಕದಲ್ಲೂ ಜನಪರ ರಾಜಕೀಯದ ಹೊಸ ಪರ್ಯಾಯವನ್ನು ರೂಪಿಸುವ ಸಂಕಲ್ಪ ವ್ಯಕ್ತಪಡಿಸಿದೆ ಎಂದು ಪಕ್ಷದ ಸದಸ್ಯ ಡಿ.ಬಸವರಾಜ್ (ಬಿ.ಟಿ.ರಾಜ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...