Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾರ್ದನ ರೆಡ್ಡಿ ಹೊಸ ಪಕ್ಷದ ಯೋಚನೆ ಬಿಟ್ಟು ಆಂಧ್ರ ಸಿಎಂ ಪಕ್ಷ ಸೇರುತ್ತಾರಾ..?

Facebook
Twitter
Telegram
WhatsApp

ಜನಾರ್ದನ ರೆಡ್ಡಿ ಸದ್ಯ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಪಡೆಯುವುದಕ್ಕೆ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಬಳ್ಳಾರಿಗೆ ಹೋಗುವಂಗಿಲ್ಲ, ಬಿಜೆಪಿಗೆ ಸೇರುವಂಗಿಲ್ಲ. ಅಡ್ಡಕತ್ತರಿಯಲ್ಲಿ ಸಿಲುಕಿ ಬೇರೆ ಬೇರೆ ದಾರಿ ಹುಡುಕುತ್ತಿದ್ದಾರೆ. ಬಳ್ಳಾರಿಯಿಂದ ದೂರವೇ ಇದ್ದು, ಕೊಪ್ಪಳದಲ್ಲಿ ರಾಜಕೀಯ ವೃತ್ತಿ ಆರಂಭಿಸಲು ಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಹೊಸ ಪಕ್ಷವನ್ನು ಸ್ಥಾಪನೆ ಮಾಡುತ್ತಾರೆ ಎಂಬ ಊಹಾಪೋಹಗಳು ಇದೆ.

ಆದ್ರೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡುವುದು ಸುಲಭದ ಕೆಲಸವಾಗಿಲ್ಲ. ಈ ಹಿಂದೆ ಬಿಜೆಪಿ ಬಗ್ಗೆ ಮನಸ್ತಾಪ ಮಾಡಿಕೊಂಡು ಬಿಎಸ್ಆರ್ ಎಂಬ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ಆದರೆ ಆ ಪಕ್ಷ ಹೇಳಿಕೊಳ್ಳುವಷ್ಟು ಉದ್ಧಾರ ಆಗಲಿಲ್ಲ. ಬಳಿಕ ಶ್ರೀರಾಮುಲು ವಾಪಾಸ್ ಬಿಜೆಪಿಗೆ ಬಂದರು.

ಇನ್ನು ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರವೂ ಸದ್ದು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವನ್ನು ಸೇರುವುದು ಸುಲಭವಾಗಿ ಕಾಣುತ್ತಿಲ್ಲ. ಯಾಕಂದ್ರೆ 2013ಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಆಗ ಇದೇ ರೆಡ್ಡಿಗಳ ವಿರುದ್ದ ತೊಡೆತಟ್ಟಿ ನಿಂತಿದ್ದರು. ಈಗ ಮತ್ತೆ ಅವರನ್ನು ಪಕ್ಷಕ್ಕೆ ಕರೆತರುವುದು ಮುಜುಗರವನ್ನುಂಟು ಮಾಡುವುದರಿಂದ ಕರೆದುಕೊಳ್ಳುವ ಸಾಧ್ಯತೆ ಕಡಿಮೆ.

ಹೀಗಾಗಿ ಈ ಎಲ್ಲಾ ಆಯಾಮಗಳು ರಾಜಕಾರನದ ಎಂಟ್ರಿಗೆ ಸುಲಭವಲ್ಲದ ಕಾರಣ ಜನಾರ್ದನ ರೆಡ್ಡಿ ಅವರು ಆಂಧ್ರ ಸಿಎಂ ಕಡೆಗೆ ವಾಲುತ್ತಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಪಕ್ಷವನ್ನು ಸೇರಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸುತ್ತಿವೆ. ಯಾಕಂದ್ರೆ ಗಣಿಗಾರಿಕೆ ನಡೆಸುತ್ತಿದ್ದಂತ ಸಮಯದಲ್ಲಿ ಜಗನ್ ಮೋಹನ್ ರೆಡ್ಡಿ ಅವರ ತಂದೆಯ ಜೊತೆಗೆ ಜನಾರ್ದನ ರೆಡ್ಡಿ ಅವರು ಆಪ್ತತೆ ಹೊಂದಿದ್ದರು. ಹೀಗಾಗಿ ವೈಎಸ್ ಆರ್ ಕಾಂಗ್ರೆಸ್ ಪಾರ್ಟಿ ಸೇರಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!