Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬರೋಬ್ಬರಿ 13 ವರ್ಷದ ಬಳಿಕ ಬಳ್ಳಾರಿ ಬಿಜೆಪಿ ಕಚೇರಿಗೆ ಕಾಲಿಟ್ಟ ಜನಾರ್ದನ ರೆಡ್ಡಿ ಪತ್ನಿ

---Advertisement---

 

ಬಳ್ಳಾರಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಡೆ ಗಳಿಗೆಯ ತನಕ ಟಿಕೆಟ್ ಗಾಗಿ ಕಾದರು. ಆದರೆ ಟಿಕೆಟ್ ಸಿಗದ ಕಾರಣ ತಮ್ಮದೇ ಆದ ಕೆ ಆರ್ ಪಿ ಪಿ ಪಕ್ಷವನ್ನು ಕಟ್ಟಿದರು. ಆ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಜನಾರ್ದನ ರೆಡ್ಡಿ ಕೂಡ ಸ್ಪರ್ಧಿಸಿ ಗೆದ್ದರ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪಕ್ಷಕ್ಕೆ ಆಹ್ವಾನ ಬಂದಿದೆ. ಇದೀಗ ಲೋಕಸಭಾ ಚುನಾವಣೆಯಿಂದ ಬಿಜೆಪಿ ಜೊತೆಗೆ ಕೆ ಆರ್ ಪಿ ಪಿ ವಿಲೀನವಾಗಿದೆ.

ಇದರ ಬೆನ್ನಲ್ಲೇ ಇಂದು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಬಿಜೆಪಿ ಕಚೇರಿಗೆ ಬಂದಿದ್ದಾರೆ. ಕಳೆದ ಹದಿಮೂರು ವರ್ಷಗಳ ಬಳಿಕ ಬಳ್ಳಾರಿಯ ಬಿಜೆಪಿ ಕಚೇರಿಗೆ ಕಾಲಿಟ್ಟಿದ್ದಾರೆ. ರೇಂಜ್ ರೋವರ್ ಕಾರಿನಲ್ಲಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ. ಅದರ ಜೊತೆಗೆ 101 ಕಾರಿನಲ್ಲಿ ಲಕ್ಷ್ಮೀ ಅರುಣಾ ಅವರ ಬೆಂಬಲಿಗರು ಬಂದಿದ್ದಾರೆ.

ಲಕ್ಷ್ಮೀ ಅರುಣಾ ಅವರಿಗೆ ಬಿಜೆಪಿಯ ಮಹಿಳಾ ಯುವ ಮೋರ್ಚಾ ಘಟಕದಿಂದ ಆರತಿ ಬೆಳಗುವ ಮೂಲಕ ಭರ್ಜರಿ ಸ್ವಾಗತ ಸಿಕ್ಕಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನಾರ್ದನ ರೆಡ್ಡಿಗೆ ಹಿಡಿತವಿದೆ. ಹೀಗಾಗಿ ಈ ಜನಾರ್ದನ ರೆಡ್ಡಿ ಸೇರ್ಪಡೆಯಿಂದಾಗಿ ಬಿಜೆಪಿಗೆ ಸುತ್ತ ಮುತ್ತ ಗೆಲುವು ಸುಲಭವಾಗಲಿದೆ. ಹೀಗಾಗಿ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ. ಇವತ್ತಿನ ಕಾರ್ಯಕ್ರಮಕ್ಕೆ ಇಂದು ಲಕ್ಷ್ಮೀ ಅರುಣಾ ಅವರು ಬಿಜೆಪಿ ಕಚೇರಿಗೆ ಹೋಗಿ ಬಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment