Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊದಲ ಬಾರಿಗೆ ವಿಧಾನಸೌಧದ ಮುಂಭಾಗದಲ್ಲಿ ಜನತಾ ದರ್ಶನ: ನಾಳೆ ಸಿಎಂ ನೇತೃತ್ವದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ

---Advertisement---

ಸುದ್ದಿಒನ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಬಾರಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದೆ. ಈ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿಕೊಟ್ಟಿದೆ. ಇದೀಗ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜನತಾ ದರ್ಶನವನ್ನು ವಿಧಾನಸೌಧದಲ್ಲಿ ನಡೆಸಲಿದೆ.

ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ನಾಳೆ ಬೆಂಗಳೂರಿಗೆ ಬಂದು ಜನತಾ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ಜನತಾ ದರ್ಶನ ನಡೆಸಲಿದ್ದು, ವಿಧಾನಸೌಧದ ಮುಂಭಾಗ ಜನರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿ, ಅಲ್ಲಿಯೇ ಪರಿಹಾರವನ್ನು ನೀಡಲಿದ್ದಾರೆ.

ಜನತಾ ದರ್ಶನ ಎಂದರೆ ರಾಜ್ಯದ ನಾನಾ ಭಾಗಗಳಿಂದ ಸಮಸ್ಯೆಗಳನ್ನು ಹೊತ್ತು ಜನ ಬರುತ್ತಾರೆ. ಹೀಗಾಗಿ ಈಗಾಗಲೇ ವಿಧಾನಸೌಧದಲ್ಲಿ ಸಿದ್ಧತೆ ನಡೆದಿದೆ. ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯಿಂದ ತಯಾರಿ‌ ಮಾಡಿಕೊಳ್ಳಲಾಗಿದೆ. ಜನ ಸ್ಪಂದನಾ ಕಾರ್ಯಕ್ರಮಕ್ಕೆ ಬೃಹತ್ ಟೆಂಟ್ ಹಾಕಲಾಗಿದೆ. 10 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 36 ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕೌಂಟರ್ ಮಾಡಲಾಗಿದೆ.

 

ನಾಳೆಯ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಅರ್ಜಿಗಳನ್ನು ಪರಿಶೀಲನೆ ಮಾಡಲಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು ಜನ ತಮ್ಮ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಎರಡನೇ ಜನಸ್ಪಂದನಾ ಕಾರ್ಯಕ್ರಮವಾಗಿದೆ. ಕಳೆದ ಬಾರಿ ಕೃಷ್ಣಾದಲ್ಲಿ ನಡೆಸಿದ್ದರು. ಆಗ 4,130 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಶೇ. 97ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment