Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ. (ಅ.26) : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
https://cbseitms.nic.in/2023/nvsxi_11/PrincipalLogin/getafflictionno ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 5 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007ರ ಜೂನ್ 1 ರಿಂದ 2009ರ ಜುಲೈ 31 ರ ನಡುವೆ ಜನಿಸಿರಬೇಕು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆ ಪರೀಕ್ಷೆಯು 2024ರ ಫೆಬ್ರವರಿ 10 ರಂದು ನಡೆಯಲಿದೆ.

8 ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ: ಹಿಂದಿ, ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ಓಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.

10ನೇ ತರಗತಿ ವಿದ್ಯಾರ್ಥಿಗಳಿಗೆ ಆಯ್ಕೆ ಪರೀಕ್ಷೆ: ಮಾನಸಿಕ ಸಾಮಥ್ರ್ಯ, ಇಂಗ್ಲಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಒಎಂಆರ್ ಆಧಾರಿತ ವಸ್ತುನಿಷ್ಠ ಪ್ರಕಾರ ದ್ವಿಭಾಷಾ ಪತ್ರಿಕೆ (ಹಿಂದಿ ಮತ್ತು ಇಂಗ್ಲಿಷ್) ಪಠ್ಯಕ್ರಮ ಮತ್ತು ಆಯ್ಕೆಯ ಮಾನದಂಡಗಳಿಗಾಗಿ ಎನ್‍ವಿಎಸ್ ಅಧಿಸೂಚನೆಯನ್ನು ನೋಡಬಹುದು.

10ನೇ ತರಗತಿ ಅಧ್ಯಯನದ ಜಿಲ್ಲೆ ಮತ್ತು ನಿವಾಸ ಒಂದೇ ಆಗಿದ್ದರೆ, ನಂತರ ಮಾತ್ರ ಅಭ್ಯರ್ಥಿಯನ್ನು ಜಿಲ್ಲಾ ಮಟ್ಟದ ಮೆರಿಟ್‍ಗೆ ಪರಿಗಣಿಸಲಾಗುತ್ತದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!