ಸುದ್ದಿಒನ್, ಚಿತ್ರದುರ್ಗ, ಜೂನ್.11 : ಜವಾಹರ್ ನವೋದಯ ವಿದ್ಯಾಲಯ (ಮಾನವ ಸಂಪನ್ಮೂಲ ಇಲಾಖೆ, ಭಾರತ ಸರ್ಕಾರ), ಉಡುವಳ್ಳಿ, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ 2026-27ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29.07.2025 ಯಾಗಿದ್ದು ಅರ್ಜಿಯನ್ನು https://cbseitms.rcil.gov.in/nvs/Index/Registration ವೆಬ್ ಸೈಟ್ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2025-26ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01.05.2014 ರಿಂದ 30.07.2016ರ ನಡುವೆ ಜನಿಸಿರಬೇಕು. ಪರೀಕ್ಷೆ ನಡೆಯುವ ದಿನಾಂಕ 13.12.2025 ಅಗಿರುತ್ತೇದೆ ಎಂದು ಜ.ನ.ವಿ, ಉಡುವಳ್ಳಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









